


ಮಡಿಕೇರಿ ಮಾ.24 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಹುತಾತ್ಮ ದಿನವನ್ನು ಆಚರಿಸಲಾಯಿತು. ಭಗತ್ ಸಿಂಗ್, ಸುಖದೇವ್, ರಾಜ್ ಗುರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್ ಸಲ್ದಾನ ಈ ಮೂರು ಕ್ರಾಂತಿಕಾರಿಗಳು ಅಸಂಖ್ಯಾತ ಭಾರತೀಯರ ಮನದಲ್ಲಿ ಇಂದಿಗೂ ಜೀವಂತವಾಗಿದ್ದಾರೆ. ದೇಶಕ್ಕಾಗಿ ಅವರು ಮಾಡಿದ ತ್ಯಾಗ ಬಲಿದಾನ ಸದಾ ಅಚ್ಚಳಿಯದೆ ಇರುತ್ತದೆ. ಈ ಮೂರು ಮಹನೀಯರಲ್ಲಿ ಇದ್ದ ದೇಶ ಪ್ರೇಮ, ದೇಶಾಭಿಮಾನದ ಎಲ್ಲಾರಲ್ಲು ನೆಳೆಯಾಗ ಬೇಕು ನಾವೆಲ್ಲ ಭಾರತೀಯರೆಂಬ ಹೆಮ್ಮೆಯಿಂದ ದೇಶ ಸೇವೆಗೆ ಸದಾ ಸಿದ್ದರಾಗಿರಬೇಕು ಎಂದರು. ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕಿ ಪ್ರಿಯ ಮುದ್ದಪ್ಪ ಮಾತನಾಡಿ, ಮೂವರು ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರು 1931 ಮಾರ್ಚ್ 23 ರಂದು ಗಲ್ಲಿಗೇರಿಸಿದ್ದರು. ಈ ದಿನವನ್ನು ಹುತಾತ್ಮ ದಿನವೆಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಭಗತ್ ಸಿಂಗ್ ಸುಖದೇವ್, ರಾಜ್ ಗುರುರ ತ್ಯಾಗ ಮತ್ತು ಶೌರ್ಯದ ಕಥೆ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅತ್ಯಂತ ಸ್ಪೂರ್ತಿದಾಯಕವಾದದ್ದು. ಯುವ ಜನತೆ ಮೋಜು ಮಸ್ತಿ ಯಲ್ಲಿ ಜೀವನ ವ್ಯರ್ಥ ಮಾಡದೇ ಸದಾ ಇಂತಹ ಮಹನೀಯರ ಕಥೆಗಳಿಂದ ಪ್ರೇರೆಪಿತರಾಗಿ ದೇಶದ ಅಭಿವೃದ್ಧಿಗೆ ಸದಾ ತಮ್ಮಿಂದಾದ ಕೊಡುಗೆ ನೀಡಬೇಕೆಂದರು. ನಂತರ ವಿದ್ಯಾರ್ಥಿನಿಯರಾದ ರಾಧಿಕ, ಕೌಶಲ್ಯ ಮಹನೀಯರ ಜೀವನ ಹಾಗೂ ಹೋರಾಟದ ಬಗ್ಗೆ ವಿಚಾರ ಮಂಡನೆ ಮಾಡಿದರು. ಕಾರ್ಯಕ್ರಮದಲ್ಲಿ ಒಂದು ನಿಮಿಷದ ಮೌನಾಚರಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸುದರ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.