


ಮಡಿಕೇರಿ ಮಾ.24 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯ ರೋಗ ವಿಭಾಗ ಮಡಿಕೇರಿ ಕೊಡಗು ಜಿಲ್ಲೆ ವತಿಯಿಂದ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದಡಿ ಕ್ಷಯ ಮುಕ್ತ ಭಾರತ 2025 ರ ಅಭಿಯಾನ ಸಂಬಂಧ ವಿಶ್ವ ಕ್ಷಯ ರೋಗ ದಿನಾಚರಣೆಯು ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಹೌದು ನಾವು ಕ್ಷಯ ರೋಗವನ್ನು ಕೊನೆಗೊಳಿಸಬಹುದು” ಬದ್ಧರಾಗಿರಿ, ಹೂಡಿಕೆ, ಮಾಡಿ, ತಲುಪಿಸಿ”ಎಂಬ ಘೋಷ ವಾಕ್ಯದ ಮಾಹಿತಿ ನೀಡಲಾಯಿತು. ಕೊಡಗು ಜಿಲ್ಲೆಗೆ ದಾನವಾಗಿ “ಸಿಬಿನೆಟ್ ಮಿಷಿನ್ ಮಂಗಳೂರು ರಿಫೈನರಿ ಅಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್” ಮಂಗಳೂರು ನೀಡಿರುವ ಮಾಹಿತಿಯನ್ನು ಡಿಟಿಒ ಡಾ. ಬಿ.ಕೆ.ಸನತ್ ಕುಮಾರ್ ತಿಳಿಸಿದರು. ಕೊಡಗು ವೈದ್ಯಕೀಯ ವಿದ್ಯಾಸಂಸ್ಥೆಯ ಡಿನ್ ಹಾಗೂ ನಿರ್ದೇಶಕ ಡಾ.ಎ.ಜೆ.ಲೋಕೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಡಾ.ಆನಂದ್, ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ,
ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ಹಾಜರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಕುಮಾರ್ ಸ್ವಾಗತಿಸಿದರು. ಡಾ: ಅಶ್ವಿನಿ ಹಾಗೂ ಅಮೃತ ಪ್ರಾರ್ಥಿಸಿದರು.
ಕ್ಷಯಮುಕ್ತ ಗ್ರಾಮ ಪಂಚಾಯತಿ : ‘ಜಿಲ್ಲೆಯಲ್ಲಿ 21 ಕ್ಷಯಮುಕ್ತ ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು, ಬಲ್ಲಮಾವಟಿ ಅಯ್ಯಂಗೇರಿ, ಕಾಕೋಟುಪರಂಬು ಗ್ರಾಮ ಪಂಚಾತಿಗೆ ಬೆಳ್ಳಿಯ ಪದಕ ಹಾಗೂ ಕಂಚಿನ ಪದಕ ಪಡೆದ ಮಡಿಕೇರಿ ತಾಲೂಕಿನ ಹಾಕತ್ತೂರು, ಮಕ್ಕಂದೂರು, ನಾಪೋಕ್ಲು, ಸಂಪಾಜೆ ಮತ್ತು ಎಮ್ಮೆಮಾಡು.ಕುಶಾಲನಗರ ಹಾಗೂ ಸೋಮವಾರಪೇಟೆ ತಾಲ್ಲೂಕಿನ ವಾಲ್ನೂರು, ತ್ಯಾಗತ್ತೂರು, ಆಲೂರು ಸಿದ್ದಾಪುರ ಬೆಟ್ಟದಲ್ಲಿ, ಬ್ಯಾಡಗುಟ್ಟ, ಗರ್ವಾಲೆ.ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಕದನೂರು, ಪಾಲಿಬೆಟ್ಟ, ದೇವರಪುರ ಮತ್ತು ಪೊನ್ನಪ್ಪಸಂತೆ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ಕ್ಷಯಮುಕ್ತ ಗ್ರಾಮ ಪಂಚಾಯಿತಿಗೆ ಪಿಡಿಒ ಹಾಗೂ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ನಿರೂಪಣೆಯನ್ನು ಎಂ.ಮಾದೇವಪ್ಪ ಹಿರಿಯ ಚಿಕಿತ್ಸೆ ಮೇಲ್ವಿಚಾರಕರು ನಡೆಸಿಕೊಟ್ಟರು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಾಥ್ ವಂದಿಸಿದರು. ಭಾದಿತಾ ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ಟನ್ನು ದಾನವಾಗಿ ನೀಡಿದ ದಾನಿಗಳಾದ ಡಾ.ಆನಂದ್ ಹಾಗೂ ರವೀಂದ್ರ ರೈ ಹಾಗೂ ರವಿಚಂದ್ರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮ ಸಂಬಂಧ ವೈದ್ಯಕೀಯ ವಿದ್ಯಾರ್ಥಿಗಳು ರಂಗೋಲಿ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಾದವರಿಗೆ ಪ್ರಥಮ ಮತ್ತು ದ್ವಿತೀಯ ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ನೀಡಲಾಯಿತು. ಅಧ್ಯಕ್ಷರ ಭಾಷಣ ಹಾಗೂ ಉಪನ್ಯಾಸ ರಸಪ್ರಶ್ನೆ ಕಾರ್ಯಕ್ರಮವನ್ನು ಡಾ.ರಾಮಚಂದ್ರ ಕಾಮತ್ ಮುಖ್ಯಸ್ಥರು ಸಮುದಾಯ ಆರೋಗ್ಯ ವಿಭಾಗ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೆರವೇರಿಸಿದರು. ಕ್ಷಯ ರೋಗದ ಅರಿವಿಗಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜಿಂಗಲ್ಸ್ ಹಾಗೂ ಆರೋಗ್ಯ ಶಿಕ್ಷಣ ಮಳಿಗೆ ತೆರೆದು ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಯ ಮುಖ್ಯ ವೈದ್ಯಾಧಿಕಾರಿಗಳು ವೈದ್ಯಾಧಿಕಾರಿಗಳು ತರಬೇತಿ ಅರೆ ವೈದ್ಯಕೀಯ ಸಿಬ್ಬಂದಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿಗಳ ಕಚೇರಿ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಪಂಚಾಯತಿ ಪಿಡಿಒ ಹಾಗೂ ಅಧ್ಯಕ್ಷರು ಇದ್ದರು.