


ಸುಂಟಿಕೊಪ್ಪ ಮಾ.25 NEWS DESK : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಶನಿವಾರ ಮುಂಜಾನೆ ಧ್ವಜಾರೋಹಣದೊಂದಿಗೆ ಆರಂಭಗೊಂಡ ತೆರೆ ಮಹೋತ್ಸವವು ಸೋಮವಾರ ಮಧ್ಯಾಹ್ನದ ವರೆಗೂ ವಿವಿಧ ಕೋಲಗಳು ಸೇರಿದಂತೆ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯಿತು. ಗಣಪತಿ ಹವನ, ಶುದ್ಧಿ ಪುಣ್ಯಾಹ, ಶ್ರೀಮುತ್ತಪ್ಪ ವೆಳ್ಳಾಟಂ, ಶ್ರೀಶಾಸ್ತಪ್ಪನ ವೆಳ್ಳಾಟಂ, ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ ಚಾಮುಂಡಿ ವೆಳ್ಳಾಟಂ, ವಿಷ್ಣುಮೂರ್ತಿ ವೆಳ್ಳಾಟಂ, ಕಳಿಗ ಪಾಟ್ ಅಂದಿವೇಳ ಕಳಸಂ, ಕಳಿಗ ಪಾಟ್ ಅಂದಿವೇಳ ಕಳಸಂ ಸ್ವೀಕರಿಸುವುದು, ವೆಳ್ಳಕಟ್ಟ್, ಗುಳಿಗನ ಕೋಲ, ಶಾಸ್ತಪ್ಪನ ಕೋಲ, ಶ್ರೀಮುತ್ತಪ್ಪ ಮತ್ತು ಶ್ರೀ ತಿರುವಪ್ಪನ ಕೋಲ, ಶ್ರೀ ರಕ್ತ ಚಾಮುಂಡಿಕೋಲ, ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ಪಳ್ಳಿವೇಟ, ಶ್ರೀ ವಿಷ್ಣುಮೂರ್ತಿಕೋಲ, ಶ್ರೀ ಚಾಮುಂಡೇಶ್ವರಿ ಕೋಲ, ವಸೂರಿ ಮಾಲೆ ಕೋಲ ನಡೆಯಿತು. ನಂತರ ಗುರುಶ್ರೀ ದರ್ಪಣ, ಬಾವುಟವನ್ನು ಇಳಿಸುವುದರೊಂದಿಗೆ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವವು ಸಂಪನ್ನಗೊಂಡಿತು. ವಿದ್ಯುತ್ ದೀಪಾಲಂಕೃತ ಭವ್ಯ ಮಮಟಪದಲ್ಲಿ ಶ್ರೀಮುತ್ತಪ್ಪ ಹಾಗೂ ತಿರುವಪ್ಪ ಮೂರ್ತಿಗಳನ್ನು ಇರಿಸಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ಚಂಡೆಯೊಂದಿಗೆ ಮೆರವಣಿಗೆಯು ಸಾಗಿತು. ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ಹಾಗೂ ಪರಿವಾರ ದೇವರುಗಳ ತೆರೆ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿದ್ಯುತ್ ದೀಪ ಹಾಗೂ ಬಣ್ಣ ಬಣ್ಣದ ಹೂಗಳಿಂದ ಸಿಂಗರಿಸಲಾಗಿತ್ತು. ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್, ಉಪಾಧ್ಯಕ್ಷ ಯಂಕನ ಶ್ರೀರಾಮ್, ಬಿ.ಡಿ.ರಾಜುರೈ,ಎನ್.ಆರ್.ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋಹನ್, ಖಜಾಂಚಿ ರಮೇಶ್ಪಿಳ್ಳೆ, ಸಹಕಾರ್ಯದರ್ಶಿ ಯಂಕನ ಕೌಶಿಕ್, ಕಾರ್ಯಕಾರಿ ಸಮಿತಿ ಸದಸ್ಯರು ಚಂದ್ರ, ಪ್ರವೀಣ, ದಿವಾಕರ ರೈ, ವಿನೋದ್, ಪ್ರಾಂತ್, ಎ.ಲೋಕೇಶ್ ಕುಮಾರ್, ರಾಮಮೂರ್ತಿ,ಪಳನಿ,ವೀಣಾರೈ, ಗಿರೀಜಾ ಉದಯಕುಮಾರ್ ಹಾಗೂ ರಮ್ಯ ಮೋಹನ್, ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡಿದ್ದರು.