



ಮಡಿಕೇರಿ ಮಾ.25 NEWS DESK : ಮರದಿಂದ ಬಿದ್ದು ಅಸ್ಸಾಂ ಮೂಲದ ಕಾರ್ಮಿಕ ಸಾವನಪ್ಪಿರುವ ಘಟನೆ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ವಾಜಿದ್ ಅಲಿ(28) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಎಮ್ಮೆಮಾಡು ಕೂರುಳಿ ಗ್ರಾಮದಲ್ಲಿ ವಾಸವಾಗಿದ್ದ ವಾಜಿದ್ ನೆಲಜಿ ಗ್ರಾಮದ ತೋಟವೊಂದರಲ್ಲಿ ಮರ ಕಪಾತು ಮಾಡುತ್ತಿದ್ದಾಗ ಕೆಳಗೆ ಬಿದ್ದಿದ್ದಾರೆ. ತಕ್ಷಣ ತೋಟದ ಮಾಲೀಕರು ಹಾಗೂ ಸಹೋದ್ಯೋಗಿಗಳು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದರಾದರು ಅಷ್ಟರಲ್ಲೆ ವಾಜಿದ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.