



ಮಡಿಕೇರಿ ಮಾ.26 NEWS DESK : ಹೆಬ್ಬಾಲೆ ಗ್ರಾ.ಪಂ ವ್ಯಾಪ್ತಿಯ ಕಣಿವೆ ಕಾವೇರಿ ನದಿ ತೀರದ ದಂಡೆಯಲ್ಲಿರುವ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ವಾರ್ಷಿಕ ಬ್ರಹ್ಮ ರಥೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಏ.6 ರಂದು ನಡೆಯಲಿದೆ. ಏ. 6.ರಂದು ಮಧ್ಯಾಹ್ನ 1.30 ರಿಂದ 2.18ರ ಶುಭ ಅಭಿಜಿನ್ ಮುಹೂರ್ತದಲ್ಲಿ ವೇದ ಬ್ರಹ್ಮ ನರಹರಿಶರ್ಮಾ ನೇತೃತ್ವದಲ್ಲಿ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನಡೆಯಲಿವೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್ ತಿಳಿಸಿದ್ದಾರೆ. ರಥೋತ್ಸವದ ಅಂಗವಾಗಿ ಏ.4 ರಿಂದಲೇ ದೇವಾನಾಂದಿ, ಅಂಕುರಾರ್ಪಣ, ರಕ್ಷಾಬಂಧನ, ಧ್ವಜಾರೋಹಣ, ನವಗ್ರಹ ಸ್ಧಾಪನೆ, 5 ರಂದು ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಗಣಪತಿ ಹೋಮ, ಸಂಜೆ ಕೂಡಿಗೆ ಮತ್ತು ಶಿರಂಗಾಲ ಗ್ರಾಮಸ್ಥರಿಂದ ಸಂಧ್ಯಾಪೂಜೆ ಮತ್ತು ಸಂಜೆ 7 ಗಂಟೆಗೆ ಸೀತಾ ಕಲ್ಯಾಣೋತ್ಸವ ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ದೇವಾಲಯದ ಆವರಣದಲ್ಲಿ ನಡೆಯಲಿವೆ ಎಂದು ಅಧ್ಯಕ್ಷ ಕೆ.ಎನ್.ಸುರೇಶ್ ತಿಳಿಸಿದ್ದಾರೆ.