Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಕ್ರಮ ಶೆಡ್ ತೆರವುಗೊಳಿಸದಿದ್ದಲ್ಲಿ ಹೊದ್ದೂರಿನಿಂದ ಮಡಿಕೇರಿಗೆ ಬೃಹತ್ ಜಾಥ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಕ್ರಮ ಶೆಡ್ ತೆರವುಗೊಳಿಸದಿದ್ದಲ್ಲಿ ಹೊದ್ದೂರಿನಿಂದ ಮಡಿಕೇರಿಗೆ ಬೃಹತ್ ಜಾಥ*

ಮಾರ್ಚ್ 27, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.27 NEWS DESK : ಹೊದ್ದೂರು ಗ್ರಾಮದಲ್ಲಿ ರೈತರ ಪಿತ್ರಾರ್ಜಿತ ಆಸ್ತಿ ಮತ್ತು ಸರಕಾರಿ ಜಾಗದಲ್ಲಿ ಕೆಲವರು ಅಕ್ರಮವಾಗಿ ನಿರ್ಮಿಸಿಕೊಂಡಿರುವ ಶೆಡ್ ಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಹೊದ್ದೂರಿನಿಂದ ಮಡಿಕೇರಿಯವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಹೊದ್ದೂರು ಘಟಕ ಎಚ್ಚರಿಕೆ ನೀಡಿದೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊದ್ದೂರು ರೈತ ಸಂಘದ ಸದಸ್ಯ ಚೆಟ್ರುಮಾಡ ಎಂ.ಬಾಲಕೃಷ್ಣ, ಹೊದ್ದೂರು ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ರೈತರ ಪಿತ್ರಾರ್ಜಿತ ಆಸ್ತಿ ಮತ್ತು ಸರಕಾರಿ ಜಾಗದಲ್ಲಿ ಹೊದ್ದೂರು ಗ್ರಾ.ಪಂ ಸದಸ್ಯರೊಬ್ಬರು ಅಕ್ರಮ ಶೆಡ್ ನಿರ್ಮಿಸಿ ಕಿರುಕುಳ ನೀಡುತ್ತಿದ್ದಾರೆ. ಅಕ್ರಮ ಶೆಡ್ ಗಳ ನಿರ್ಮಾಣದ ಕುರಿತು ಸಂಬಂಧಪಟ್ಟ ಇಲಾಖೆಗಳಿಗೆ ದೂರು  ಸಲ್ಲಿಸಿದರೂ ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.  ಕಳೆದ ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ನ್ಯಾಯಯುತವಾಗಿ ಜೀವನ ಸಾಗಿಸುತ್ತಿರುವವರನ್ನು ಒಕ್ಕಲೆಬ್ಬಿಸಲು ನಡೆಸುತ್ತಿರುವ ಪ್ರಯತ್ನಗಳು ಖಂಡನೀಯ ಮತ್ತು ಈ ಪ್ರಕರಣವನ್ನು ಆಡಳಿತ ವ್ಯವಸ್ಥೆ ಗಂಭೀರವಾಗಿ ಪರಿಗಣಿಸಬೇಕು. ಅಕ್ರಮ ಶೆಡ್‍ಗಳನ್ನು ತೆರವುಗೊಳಿಸಿ ಅದೇ ಜಾಗವನ್ನು ರೈತರಿಗೆ ಮರು ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದರು.  ಸಂಘದ ಕಾರ್ಯಾಧ್ಯಕ್ಷ ಪಿ.ಎಂ.ವಾಸುದೇವ ಮಾತನಾಡಿ, ಹೊದ್ದೂರು ಗ್ರಾಮದಲ್ಲಿ ಒಟ್ಟು 9 ಕಾಲೋನಿಗಳಿದ್ದು, 1500 ಕ್ಕಿಂತಲೂ ಹೆಚ್ಚಿನ ಮನೆ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಹೊದ್ದೂರು ಗ್ರಾಮದಲ್ಲಿ ವಸತಿ ರಹಿತರಿಗೆ ನಿವೇಶನ ಕೊಡುವುದನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು. ತಹಶೀಲ್ದಾರರು ನೀಡಿರುವ ಭರವಸೆಯಂತೆ ನಿಗದಿತ ಸಮಯದೊಳಗೆ ತೆರವುಗೊಳಿಸದೆ ಇದ್ದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಬಿಟ್ಟುಕೊಟ್ಟಂತಹ ಪಿತ್ರಾರ್ಜಿತ ಆಸ್ತಿಗೆ ರೈತ ಸಂಘದ ವತಿಯಿಂದ ಬೇಲಿ ನಿರ್ಮಿಸಿ ವಶಕ್ಕೆ ಪಡೆದು ಕೃಷಿ ಕಾರ್ಯ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ರಾಜ್ಯ ರೈತ ಸಂಘ ಜಿಲ್ಲಾ ರೈತ ಸಂಘದ ಸಹಯೋಗದೊಂದಿಗೆ ಬೃಹತ್ ಜಾಥಾ ಹಮ್ಮಿಕೊಳ್ಳಲಾಗುವುದು. ಮುಂದೆ ಆಗಬಹುದಾದ ಕಷ್ಟ-ನಷ್ಟಗಳಿಗೆ ಜಿಲ್ಲಾಡಳಿತ, ಪಂಚಾಯಿತಿ ಹಾಗೂ ಸಂಬಂಧಪಟ್ಟ ವ್ಯಕ್ತಿಯೇ ನೇರ ಹೊಣೆಯಾಗಬೇಕಾಗುತ್ತದೆ ಎಂದರು. ಹೊದ್ದೂರು ರೈತ ಸಂಘ ಹಾಗೂ ಜಿಲ್ಲಾ ರೈತ ಸಂಘದ ಸಹಯೋಗದೊಂದಿಗೆ 2025 ಮಾರ್ಚ್ 15 ರಂದು ಹೊದ್ದೂರು ಗ್ರಾಮದಲ್ಲಿ ಪ್ರತಿಭಟನಾ ಸಭೆಯನ್ನು ನಡೆಸಲಾಗಿದೆ, ಆ ಸಂದರ್ಭ ಹಾಜರಿದ್ದ ಮಡಿಕೇರಿ ತಹಶೀಲ್ದಾರರಿಗೆ 15 ದಿನಗಳ ಒಳಗೆ ಶೆಡ್ ತೆರವುಗೊಳಿಸುವಂತೆ ಮನವಿಪತ್ರ ನೀಡಲಾಗಿತ್ತು. ಕುಂಬಳದಾಳು ರಸ್ತೆಯ ಪೆಗ್ಗೋಲಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್‍ಗಳನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.  ಈ ಜಾಗಕ್ಕೆ ನಾವುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅದು ವಾಸಕ್ಕೆ ಯೋಗ್ಯವಾಗಿಲ್ಲ. ಅಲ್ಲದೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ವರದಿಯಲ್ಲೂ ವಾಸಕ್ಕೆ ಯೋಗ್ಯ ಜಾಗವಲ್ಲವೆಂದು ತಿಳಿಸಲಾಗಿದೆ ಎಂದರು. ಹೊದ್ದೂರಿನಲ್ಲಿ ವಸತಿ ರಹಿತರಿಗೆ ನಿವೇಶನ ನೀಡುವ ವಿಚಾರದಲ್ಲಿ ನಮ್ಮ ಅಭ್ಯಂತರವಿಲ್ಲ, ಸರಕಾರದ ಆದೇಶದಂತೆ ನೀಡುವುದಾದರೆ ನೀಡಲಿ. ಆದರೆ ಸರಕಾರದ ಯಾವುದೇ ಮಾನದಂಡವನ್ನು ಅನುಸರಿಸದೆ, ಪರ ಊರಿನಿಂದ ಬಂದಂತಹ ಜನರಿಗೆ ನಿವೇಶನ ಕೊಡಿಸುವ ಲಾಬಿ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯಿಂದ ಮಾಹಿತಿ ಹಕ್ಕು ನಿಯಮದಡಿ ಮಾಹಿತಿ ಕೇಳಿದಾಗ ಇಲ್ಲಿಯವರೆಗೆ ನೀಡಿಲ್ಲ ಎಂದು ಆರೋಪಿಸಿದರು. ರೈತ ಸಂಘದ ಸದಸ್ಯ ಚೆಟ್ಟಿಮಾಡ ಲೋಕೇಶ್ ಮಾತನಾಡಿ, ಕುಂಬಳದಾಳು ರಸ್ತೆಯಲ್ಲಿರುವ ತೆಕ್ಕಡೆ ಎಸ್.ಸೋಮಣ್ಣ ಅವರು ಸಾರ್ವಜನಿಕ ರಸ್ತೆಗಾಗಿ ಕಾಫಿ ಮತ್ತು ಕಾಳುಮೆಣಸು ಕೃಷಿ ಮಾಡಿರುವ ಸುಮಾರು 1 ಏಕರೆ ಭೂಮಿಯನ್ನು ಬಿಟ್ಟುಕೊಟ್ಟಿದ್ದಾರೆ. ಇದಕ್ಕೆ ಬದಲಿಯಾಗಿ ಪಕ್ಕದಲ್ಲಿರುವ ಸರಕಾರದ ಜಾಗವನ್ನು ಕೃಷಿ ಮಾಡಲು ತಿಳಿಸಿದ್ದು, ಈ ಜಮೀನಿನಲ್ಲಿ ಕಳೆದ 20 ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಅಲ್ಲದೆ, ಇದೇ ರಸ್ತೆಗೆ ಬಡುವಂಡ ದೇವಿ ಸುಬ್ರಮಣಿ ಎಂಬುವವರು ಒಂದು ಏಕರೆಗಿಂತಲೂ ಹೆಚ್ಚಿನ ಜಾಗವನ್ನು ಕಾಫಿ ಹಾಗೂ ಕಾಳುಮೆಣಸಿನ ಗಿಡಗಳನ್ನು ಕಡಿದು ಬಿಟ್ಟುಕೊಟ್ಟಿದ್ದಾರೆ. ಇದಕ್ಕೆ ಬದಲಿಯಾಗಿ ಪಕ್ಕದ ಸರಕಾರಿ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದು, ಈಗ ಕೃಷಿ ಮಾಡಿರುವ ಕಾಫಿ ತೋಟದಲ್ಲಿ ಪಂಚಾಯಿತಿ ಸದಸ್ಯನ ಕುಮ್ಮಕ್ಕಿನಿಂದ ಕೆಲವರು ಶೆಡ್ ನಿರ್ಮಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ ಮಾತನಾಡಿ, ಸರಕಾರಿ ಜಮೀನಿನಲ್ಲಿ ನಿವೇಶನ ಕೊಡಲು ಸರಕಾರ, ಜಿಲ್ಲಾಡಳಿತವಿದ್ದು, ಪಂಚಾಯಿತಿ ಸದಸ್ಯನಿಗೆ ಯಾವ ಅಧಿಕಾರವಿದೆ. ಆತ ಕಾನೂನು ಉಲ್ಲಂಘಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ. ಸರಕಾರ ಹಾಗೂ ಜಿಲ್ಲಾಡಳಿತ ಮೌನಕ್ಕೆ ಶರಣಾಗಿದ್ದು, ಅಸಾಹಯಕ ಪರಿಸ್ಥಿತಿಯಲ್ಲಿದೆ ಎಂದು ಟೀಕಿಸಿದರು. ರಾತ್ರೋರಾತ್ರಿ ಅಕ್ರಮ ಪ್ರವೇಶಮಾಡಿ ನೂರಾರು ಕಾಫಿ ಗಿಡಗಳನ್ನು ಕಡಿದು ಶೆಡ್ ನಿರ್ಮಿಸಿರುವುದು ಸರಿಯಾದ ಕ್ರಮವಲ್ಲ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದೆ ಇದ್ದಲ್ಲಿ ರೈತ ಸಂಘದ ವತಿಯಿಂದ ಕೊಡಗಿನ ವಿವಿಧ ರೈತ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿಕೊಂಡು ಹೊದ್ದೂರಿನಿಂದ ಮಡಿಕೇರಿಯ ಜಿಲ್ಲಾಡಳಿತದ ಕಚೇರಿವರೆಗೆ ಬೃಹತ್ ಜಾಥಾ ನಡೆಸಲಾಗುವುದು. ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಂಡು ಮಾತುಕತೆಯ ಮೂಲಕ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕೆಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ ಹಾಗೂ ಹೊದ್ದೂರು ಘಟಕದ ಬಡುವಂಡ ಸುಬ್ರಮಣಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.