




ಮಡಿಕೇರಿ NEWS DESK ಮಾ.28 : ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ ಹಾಗೂ ಪತ್ನಿಯ ಅಜ್ಜ, ಅಜ್ಜಿಯನ್ನು ಭೀಕರವಾಗಿ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಘಟನೆ ಇಂದು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಗಿರೀಶ್(35) ಎಂಬಾತ ಕೊಲೆ ಆರೋಪಿಯಾಗಿದ್ದು, ಘಟನೆ ಬಳಿಕ ತಲೆ ಪರೆಸಿಕೊಂಡಿದ್ದಾನೆ. ಜೇನು ಕುರುಬರ ಕರಿಯ(75), ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(5) ಕತ್ತಿಯಿಂದ ಹತ್ಯೆಗೀಡಾದವರಾಗಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಗಿರೀಶ್ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ.