





ಮಡಿಕೇರಿ ಮಾ.29 NEWS DESK : ಸುಳ್ಯ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಮೂರು ಧರ್ಮ ಗುರುಗಳನ್ನು ಸನ್ಮಾನಿಸಲಾಯಿತು. ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ಇಪ್ಪತ್ತನೇ ವರ್ಷದ ಸರ್ವಧರ್ಮ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮರ್ಕಂಜ ಅನ್ನಪೂರ್ಣೇಶ್ವರಿ ಕ್ಷೇತ್ರದ ಯೋಗೇಶ್ವರ ಸಿದ್ದ ಪುರುಷ ಮಠದ ಧರ್ಮದರ್ಶಿ ರಾಜೇಶ್ ನಾಥ್ ಜಿ., ಸುಳ್ಯ ಬೀರಮಂಗಲ ಸೈಂಟ್ ವಿಕ್ಟರ್ ಚರ್ಚ್ನ ಧರ್ಮ ಗುರು ಫಾದರ್ ವಿಕ್ಟರ್ ಡಿ’ಸೋಜಾ, ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಅವರನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಶಾಲು ಹೊದಿಸಿ ಸನ್ಮಾನಿಸಿದರು. ಇಫ್ತಾರ್ ಬಿಡುವ ಸಂದರ್ಭದಲ್ಲಿ ಧರ್ಮದರ್ಶಿ ರಾಜೇಶ್ ನಾಥ್ ಜಿ ಖರ್ಜುರವನ್ನು ಫಾದರ್ ವಿಕ್ಟರ್ ಡಿ’ಸೋಜ ಹಣ್ಣು ಹಂಪಲುಗಳನ್ನು ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ತಿನ್ನಿಸುವ ಮೂಲಕ ಭಾವೈಕ್ಯತೆಯ ಸಂದೇಶವನ್ನು ಸಾರಿದರು. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸುಳ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ, ವಲಯಾರಣ್ಯಾಧಿಕಾರಿ ಮಂಜುನಾಥ್, ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್, ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ಮುಖಂಡರಾದ ರಾಧಾಕೃಷ್ಣ ಬೊಳ್ಳೂರು, ಪಿ.ಎಸ್.ಗಂಗಾಧರ್, ಗೋಕುಲ್ ದಾಸ್, ಮಹಮ್ಮದ್ ಇಕ್ಬಾಲ್ ಎಲಿಮಲೆ, ಶಂಸುದ್ದಿನ್, ಟಿ.ಎಂ.ಶಮೀರ್ ತೆಕ್ಕಿಲ್, ಭವಾನಿಶಂಕರ ಕಲ್ಮಡ್ಕ, ಚೇತನ್ ಕಜೆಗದ್ದೆ, ಟಿ.ಎಂ.ಜಾವೆದ್ ತೆಕ್ಕಿಲ್, ಮೊದಲಾದವರು ಉಪಸ್ಥಿತರಿದ್ದರು. ಪ್ರತಿಷ್ಟಾನ ಕಾರ್ಯದರ್ಶಿ ಅಶ್ರಫ್ ಗುಂಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.