




ನಾಪೋಕ್ಲು ಏ.5 NEWS DESK : ಇಂದಿರಾ ನಗರದಲ್ಲಿ ಶಾಸಕರ ಅನುದಾನದಿಂದ ಬಿಡುಗಡೆಯಾದ 20 ಲಕ್ಷ ರೂ.ನ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಬೇತು ಮುಖ್ಯ ರಸ್ತೆಯಿಂದ ಇಂದಿರಾನಗರಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಇಂದಿರಾನಗರದಲ್ಲಿ 20 ಲಕ್ಷ ರೂ.ಶಾಸಕರ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ರಸ್ತೆ ನಿರ್ಮಾಣದಿಂದ ಸ್ಥಳೀಯ ಬಹಳಷ್ಟು ಸಮಸ್ಯೆ ಪರಿಹಾರವಾಗಿ ಪ್ರಯೋಜನವಾಗಲಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎ.ಇಸ್ಮಾಯಿಲ್ ಮಾತನಾಡಿ, ಇಂದಿರಾ ನಗರದಲ್ಲಿ 150-200 ಮನೆಗಳಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತರು ವಾಸಿಸುತ್ತಿರುವುದನ್ನು ಮನಗಂಡು ಶಾಸಕರ ಮುತುವರ್ಜಿಯಿಂದ ಕಾಂಕ್ರಿಟ್ ರಸ್ತೆ ನಿರ್ಮಾಣವಾಗಲಿದ್ದು, ನಾಗರಿಕರಿಗೆ ಪ್ರಯೋಜನವಾಗಲಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಶಾಸಕ ಎ.ಎಸ್.ಪೆÇನ್ನಣ್ಣ ಉದ್ಘಾಟಿಸಲಿದ್ದಾರೆ ಎಂದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕಂಗಂಡ ಶಶಿ ಮಂದಣ್ಣ, ಕಾಂಗ್ರೆಸ್ ವಲಯ ಅಧ್ಯಕ್ಷ ಹಾಗೂ ಗ್ರಾ.ಪಂ ಸದಸ್ಯರಾದ ಮಾಚೇಟಿರ ಕುಸು ಕುಶಾಲಪ್ಪ, ಸದಸ್ಯ ಮೊಹಮ್ಮದ್ ಕುರೈಸಿ, ಜಿಲ್ಲಾ ಕಾಂಗ್ರೆಸ್ ಉಪ ಅಧ್ಯಕ್ಷ ಎಂ.ಹೆಚ್ ಅಬ್ದುಲ್ ರೆಹಮಾನ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ- ದುಗ್ಗಳ ಸದಾನಂದ.