






ವಿರಾಜಪೇಟೆ ಏ.8 NEWS DESK : ವಿರಾಜಪೇಟೆ ನಗರದ ಚಿಕ್ಕಪೇಟೆ ಛತ್ರಕೆರೆಯ ಸಮೀಪದ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಏ.12 ರಂದು ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ. ಅಂದು ಪ್ರಾ:ಥಕಾಲ ಅಭಿಷೇಕ ಪೂಜೆ ಆರಂಭವಾಗಿ ಮಧ್ಯಾಹ್ನ ಶ್ರೀ ಸ್ವಾಮಿಗೆ ಮಾಹಾಪೂಜೆ ನೆರವೇರಲಿದೆ. ನಂತರ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.