








ಸೋಮವಾರಪೇಟೆ ಏ.12 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂದತ್ವ ನಿಯಂತ್ರಣ ಸಂಸ್ಥೆ ಕೊಡಗು, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡಮಳ್ತೆ ಗ್ರಾಮ ಪಂಚಾಯತಿ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಕಾಗಡಿಕಟ್ಟೆ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ನಡೆಯಿತು. ಶಿಬಿರವನ್ನು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಉದ್ಘಾಟಿಸಿ, ಮಾತನಾಡಿ ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳಬೇಕು. ಅದರಲ್ಲೂ ದೃಷ್ಟಿ ದೋಷವಿದ್ದವರು, ತಜ್ಞ ವೈದ್ಯರೊಂದಿಗೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲಾ ಕಡೆ ನೇತ್ರ ಚಿಕಿತ್ಸೆ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ನೇತ್ರ ಚಿಕಿತ್ಸಾ ಶಿಬಿರಗಳು ಆಯೋಜನೆಗೊಂಡಾಗ ಸಮಸ್ಯೆಯಿದ್ದವರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಶಂಕರ್, ಸಿಬ್ಬಂದಿ ವಿಶ್ವರೂಪಚಾರ್, ಹಾಸನ ಅಮ್ಮ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಪ್ರೀತಿ, ಅಪೂರ್ವ, ಆಶಾ ಕಾರ್ಯಕರ್ತೆಯರಾದ ಈಶ್ವರಿ, ಉಷಾ, ಶೈಲಾ ವಸಂತ್ ಇದ್ದರು.