









ಸುಂಟಿಕೊಪ್ಪ ಏ.14 NEWS DESK : ಸಂತ ಅಂತೋಣಿ ದೇವಾಲಯದಲ್ಲಿ ಕ್ರೈಸ್ತ ಭಾಂದವರು ಗರಿಗಳ ಭಾನುವಾರವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ದೇವಾಲಯದ ಧರ್ಮಗುರು ವಿಜಯಕುಮಾರ್, ಸಂತ ಮೇರಿ ಶಾಲಾ ಶಾಲಾವರಣದಲ್ಲಿ ತೆಂಗಿನ ಗರಿಗಳನ್ನು ಆರ್ಶಿವಚಿಸಿ, ಕ್ರೈಸ್ತ ಬಾಂಧವರಿಗೆ ವಿತರಿಸಿದರು. ನಂತರ ಶಾಲಾ ಆವರಣದಿಂದ ದೇವಾಲಯದವರೆಗೆ ಮೆರವಣಿಗೆಯನ್ನು ನಡೆಸಿ ದೇವಾಲಯದಲ್ಲಿ ವಿಶೇಷ ಗಾಯನ, ಬಲಿಪೂಜೆ, ಪ್ರಭೋದನೆಯನ್ನು ಅರ್ಪಿಸಿ ಪವಿತ್ರ ವಾರಕ್ಕೆ ಮುನ್ನುಡಿ ಇಡಲಾಯಿತು. ಈ ಸಂದರ್ಭ ಸಂತ ಕ್ಲಾರ ಕನ್ಯಾಸ್ತ್ರೀ ಮಠದ ಕನ್ಯಾಸ್ತ್ರೀಯರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬಲಿಪೂಜೆ, ಪ್ರಬೋದನೆ ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.