Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಏ.16 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು

*ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಏ.16 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*

April 14, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಏ.14 NEWS DESK : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಏ.16 ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಮಿತಿಯ ಉಪಾಧ್ಯಕ್ಷ ಕೆ.ಎ.ಯಾಕುಬ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಸ್ಲಿಮರ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಒಗ್ಗಟ್ಟಿನ ಹೋರಾಟ ನಡೆಸುವುದಕ್ಕಾಗಿ ಇಬ್ಬರು ಖಾಝಿಗಳ ನೇತೃತ್ವದಲ್ಲಿ ಜಿಲ್ಲಾ ಸುನ್ನಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ಸಾಗಲಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸ್ವಾತಂತ್ರ್ಯ ಪೂರ್ವದಿಂದಲೇ ರಾಜರು, ಬ್ರಿಟಿಷರು ಹಾಗೂ ದಾನಿಗಳು ಮಸೀದಿಗೆ ದಾನವಾಗಿ ಜಾಗವನ್ನು ನೀಡಿದ್ದಾರೆ. ಅಂದಿನಿಂದ ಇಂದಿನವರೆಗೆ ಈ ಆಸ್ತಿಯನ್ನು ಬಳಸಿಕೊಂಡು ವಿದ್ಯಾರ್ಥಿಗಳ ಶಿಕ್ಷಣ, ಸಿಬ್ಬಂದಿಗಳ ವೇತನ ಮತ್ತಿತರ ಕಾರ್ಯಗಳಿಗಾಗಿ ಸದುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಸುಮಾರು 200-300 ವರ್ಷಗಳಿಂದ ಈ ಆಸ್ತಿಯನ್ನು ಸಂರಕ್ಷಿಸಿಕೊಂಡು ಬರಲಾಗುತ್ತಿದ್ದು, ಮಸೀದಿ, ಈದ್ಗಾ ಮೈದಾನ ಮತ್ತು ಖಬರ್ ಸ್ಥಾನಗಳ ವ್ಯವಸ್ಥೆಯಲ್ಲಿ ನಮ್ಮದೇ ತೀರ್ಮಾನಗಳು ಅಂತಿಮವಾಗುತ್ತದೆ. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿರುವ ತಿದ್ದುಪಡಿ ಕಾಯ್ದೆ ಹಳೆಯ ನಿಯಮಗಳಿಗೆ ವ್ಯತಿರಿಕ್ತವಾಗಿದೆ. ದೇವರ ಹೆಸರಿಗೆ ದಾನವಾಗಿ ನೀಡಿದ ಆಸ್ತಿ ದೇವರ ಹೆಸರಿನಲ್ಲೇ ಇರಬೇಕೆನ್ನುವ ನಿಯಮವಿದೆ. ಕೇವಲ ರಾಜಕೀಯಕ್ಕಾಗಿ ಮತ್ತು ಹಿಂದೂ ಹಾಗೂ ಮುಸಲ್ಮಾನರ ನಡುವೆ ಭೇದ ಉಂಟು ಮಾಡುವುದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಕೆ.ಎ.ಯಾಕುಬ್ ಆರೋಪಿಸಿದರು.
ಕೇಂದ್ರ ಸರ್ಕಾರದ ಈ ನಿಲುವು ವಿಷಾದನೀಯ ಮತ್ತು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಿತಿಯ ಉಪಾಧ್ಯಕ್ಷ ಪಿ.ಎಂ.ಲತೀಫ್ ಮಾತನಾಡಿ, ಈ ಹಿಂದೆಯೂ ಮೂರು ಬಾರಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಇದು ವಕ್ಫ್ ಆಸ್ತಿಯ ಸಂರಕ್ಷಣೆಗೆ ತೆಗೆದುಕೊಂಡ ಕಠಿಣ ನಿಲುವಾಗಿತ್ತು. ಆದರೆ ಈಗಿನ ತಿದ್ದುಪಡಿ ಹಿಂದಿನ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು. ವಕ್ಫ್ ಕಾಯ್ದೆ ತಿದ್ದುಪಡಿ ಸಂದರ್ಭ ಕೇಂದ್ರ ಸರ್ಕಾರ ಸರ್ವ ಪಕ್ಷಗಳ ನಿಯೋಗವನ್ನು ಸೇರಿಸಿ 40 ಅಂಶಗಳನ್ನು ಮುಂದಿಟ್ಟಿತ್ತು. ಹಿಂದಿನ ನಿಯಮಕ್ಕೆ ವಿರುದ್ಧವಾದ ಅಂಶಗಳನ್ನು ಕೆಲವು ಪಕ್ಷಗಳು ವಿರೋಧಿಸಿದ್ದರೂ ಇದನ್ನು ತೆಗೆದು ಹಾಕದೆ ಮತ್ತೆ 14 ಅಂಶಗಳನ್ನು ಸೇರಿಸಿ ಒಟ್ಟು 54 ಅಂಶಗಳನ್ನೊಳಗೊಂಡ ಕಾಯ್ದೆಯನ್ನು ರಚಿಸಿ ತಿದ್ದುಪಡಿ ತರಲಾಗಿದೆ. ಇದು ಮುಂಬರುವ ಚುನಾವಣೆಯಲ್ಲಿ ಬಹುಮತ ಪಡೆಯುವುದಕ್ಕಾಗಿ ಮಾಡಿದ ತಿದ್ದುಪಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಿತಿಯ ಮಾಧ್ಯಮ ಸಂಚಾಲಕ ಸಿ.ಎಂ.ಹಮೀದ್ ಮೌಲವಿ ಮಾತನಾಡಿ, ವಕ್ಫ್ ಕಾಯ್ದೆ ತಿದ್ದುಪಡಿಯ ಹಿಂದೆ ದೊಡ್ಡ ಷಡ್ಯಂತ್ರವಿದ್ದು, ದೇಶದ ಸಂವಿಧಾನ ಮತ್ತು ಕಾನೂನಿಗೆ ವಿರುದ್ಧವಾಗಿದೆ. ಇದರಿಂದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಲ್ಲದೆ ಆಸ್ತಿ ಕಬಳಿಸುವ ಹುನ್ನಾರವೂ ಅಡಗಿದೆ ಎಂದು ಆರೋಪಿಸಿದರು. ಸಂವಿಧಾನವನ್ನು ಒಪ್ಪಿಕೊಳ್ಳುವ ಎಲ್ಲಾ ಭಾರತೀಯ ಮುಸಲ್ಮಾನರು ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಈ ಕಾರಣದಿಂದ ಮಡಿಕೇರಿಯಲ್ಲಿ ಕೂಡ ಬುಧವಾರ ಶಾಂತಿಯುತ ಪ್ರತಿಭಟನೆ ನಡೆಯಲಿದೆ. ಸುನ್ನಿ ಸಮನ್ವಯ ಸಮಿತಿಯ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ತಮ್ಮ ತಮ್ಮ ವಾಹನಗಳಲ್ಲಿ ಬೃಹತ್ ಸಂಖ್ಯೆಯಲ್ಲಿ ಮಡಿಕೇರಿಗೆ ಆಗಮಿಸಲಿದ್ದಾರೆ. ಪ್ರತಿಭಟನಾ ಮೆರವಣಿಗೆ ಸಂದರ್ಭ ಯಾವುದೇ ರಾಜಕೀಯ ಪಕ್ಷದ ಧ್ವಜವನ್ನು ಬಳಸುವಂತಿಲ್ಲ. ಸುನ್ನಿ ಸಮನ್ವಯ ಸಮಿತಿ ನೀಡುವ ಧ್ವಜವನ್ನು ಹಾಗೂ ಘೋಷಣೆಯನ್ನು ಮಾತ್ರ ಬಳಸಬೇಕು ಎಂದು ತಿಳಸಿದರು. ಸಮಿತಿಯ ಕಾರ್ಯದರ್ಶಿ ಅಬ್ದುಲ್ ಹಫೀಜ್ ಹಾಜಿ ಮಾತನಾಡಿ, ಕೇಂದ್ರ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಖಜಾಂಚಿ ಮಹಮ್ಮದ್ ಹಾಜಿ ಕುಂಜಿಲ ಹಾಗೂ ಕಾರ್ಯದರ್ಶಿ ಉಮ್ಮರ್ ಫೈಝಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಎಸ್‌ಬಿಐ ಲೈಫ್ ಇನ್ಸೂರೆನ್ಸ್ ಕಂಪೆನಿಯಲ್ಲಿ ಉದ್ಯೋಗ ಅವಕಾಶ*
Next Article *ನಾಪೋಕ್ಲು : ಭಾಗ್ಯವತಿಗೆ ಸನ್ಮಾನ*

Website design development company services in Mangalore

Forex Trading Teacher in India

Related Posts

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

ಕೊಡಗಿನ ಮಳೆಬೆಳೆಗಳ ವರದಾತ, ಭಕ್ತರ ರಕ್ಷಕ, ಭವರೋಗ ನಿವಾರಕನೆಂದೇ ಖ್ಯಾತಿವೆತ್ತ ಪಾಡಿ ಶ್ರೀ ಇಗ್ಗುತಪ್ಪ ದೇವರ *ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವವು*…

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.