
ಮಡಿಕೇರಿ ಏ.16 NEWS DESK : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು 2024-25 ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ ಫೆಲೋಶಿಪ್ ನೀಡಲಾಗುತ್ತದೆ. ಕನಕದಾಸರ ಮುಂಡಿಗೆ ಸಾಹಿತ್ಯ-ತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯ-ತಾತ್ವಿಕ ಅಧ್ಯಯನ, ಕನ್ನಡದಲ್ಲಿ ಕೀರ್ತನ ಸಾಹಿತ್ಯದ ಸಮಾಜೋ-ಸಾಂಸ್ಕೃತಿಕ ಅಧ್ಯಯನ ಈ ವಿಷಯಗಳ ಕುರಿತು ಅಧ್ಯಯನ ನಡೆಸಬೇಕು. 12 ತಿಂಗಳ ಅವಧಿಯ ಈ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ ಯುವ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರವನ್ನು ಒಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯ ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಅಕರ ಸಾಮಾಗ್ರಿಒಳಗೊಂಡ ಸಂಕ್ಷಿಪ್ತ ಮಾಹಿತಿಯಿರುವ ಸಾರಲೇಖವನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ಆಸಕ್ತಿಯಿರುವ 20 ರಿಂದ 55 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಯನ್ನು ಅಧ್ಯಯನ ಕೇಂದ್ರ ಇ-ಮೇಲ್ಗೆ ಅಥವಾ ಅಂಚೆ ಮೂಲಕ ಕಳುಹಿಸಬಹುದು. ಅರ್ಜಿ ಸಲ್ಲಿಸಲು ಮೇ, 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ದೂ.ಸಂ.080-22113147 ಹಾಗೂ 6364529319 ನ್ನು ಸಂಪರ್ಕಿಸಬಹುದು. ಇ-ವಿಳಾಸ kanakaresearchcentre@gmail.com ಮತ್ತು ವೆಬ್ಸೈಟ್ https://kanakadasaresearchcenter.karnataka.gov.in ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ತಿಳಿಸಿದ್ದಾರೆ.









