ಮಡಿಕೇರಿ ಏ.17 NEWS DESK : ಡ್ರಾವಿಡ ವಿಶ್ವವಿದ್ಯಾಲಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಎಂ.ಎನ್.ವನಿತ್ ಕುಮಾರ್ಗೆ ಪಿ.ಹೆಚ್.ಡಿ ಪದವಿ ಲಭಿಸಿದೆ. ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಜಿ.ಹೆಚ್.ನಾಗರಾಜು ಅವರ ಮಾರ್ಗದರ್ಶನದಲ್ಲಿ “ಕರ್ನಾಟಕದಲ್ಲಿ ಮೂರು ಹಂತದ ವ್ಯವಸ್ಥೆ- ಮೈಸೂರು ಜಿಲ್ಲಾ ಪಂಚಾಯಿತಿ ಕುರಿತು ಒಂದು ಅಧ್ಯಯನ” ಎಂಬ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಡ್ರಾವಿಡ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಈ ಹಿಂದೆ ಕಾವೇರಿ ಕಾಲೇಜು ಗೋಣಿಕೊಪ್ಪಲು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಕೆಲಸ ನಿರ್ವಹಿಸಿದ ಇವರು ಪ್ರಸ್ತುತ ಡಿ.ದೇವರಾಜ್ ಅರಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂದೆಯಂಡ ವನಿತ್ ಕುಮಾರ್(ಸಂಜು) ಆಲೂರು ಸಿದ್ದಾಪುರ ಗ್ರಾಮದ ಮಂದೆಯಂಡ ನಾಣಯ್ಯ ಮತ್ತು ಪೊನ್ನಮ್ಮ ದಂಪತಿಯ ಪುತ್ರ.

=









