
ಸುಂಟಿಕೊಪ್ಪ,ಏ.18 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಪ್ರಾರ್ಥನಾ ಕೂಟ ನಡೆಯಿತು. ಪವಿತ್ರ ಗುರುವಾರದ ಸಂಜೆ ಕಡೆಯ ಭೋಜನ ವಿಶೇಷ ಬಲಿಪೂಜೆಯನ್ನು ಸಂತ ಮೇರಿ ಶಾಲಾವರಣದಲ್ಲಿ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ನೇರವೇರಿಸಿದರು. ಧರ್ಮಗುರುಗಳಾದ ವಂ.ಫಾ.ವಿಜಯಕುಮಾರ್ ಅವರು ದೇವಾಲಯದ ಹಿರಿಯರು ಕ್ರೈಸ್ತಭಾಂದವರ ಪಾದಗಳನ್ನು ತೊಳೆಯುವ ಮೂಲಕ ಪ್ರಭು ಕ್ರಿಸ್ತರ ನಡೆಸಿದ ಮಹತ್ಕಾರ್ಯವನ್ನು ನೆನಪಿಸಿದರು. ನಂತರ ಕನ್ಯಾಸ್ತ್ರೀಯರು, ಕ್ರೈಸ್ತ ಭಾಂದವರು ಮಧ್ಯರಾತ್ರಿಯವರೆಗೆ ವಿಶೇಷ ಪ್ರಾರ್ಥನೆ ದ್ಯಾನಗಳಲ್ಲಿ ತೊಡಗಿಸಿಕೊಂಡಿದ್ದರು. ನೂರಾರು ಸಂಖ್ಯೆಯಲ್ಲಿ ನೇರೆದಿದ್ದ ಕ್ರೈಸ್ತ ಭಾಂದವರು ಪ್ರಾರ್ಥನಾಕೂಟದಲ್ಲಿ ಪಾಲ್ಗೊಂಡಿದ್ದರು.









