






ಮಡಿಕೇರಿ ಏ.18 NEWS DESK : ಲಾರಿ ಮತ್ತು ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ತಾಯಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕೊಡಗಿನ ಹಾತೂರು ಗ್ರಾಮದಲ್ಲಿ ನಡೆದಿದೆ. ಬಿ.ಶೆಟ್ಟಗೇರಿ ಗ್ರಾಮದ ಅರ್ಚಕ ದಿ.ಪುಂಡರಿಕಾಕ್ಷ ಅವರ ಪತ್ನಿ ಲಲಿತ(70) ಹಾಗೂ ಪುತ್ರ, ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಸುದರ್ಶನ(42) ಮೃತ ದುರ್ದೈವಿಗಳು. ಮೈಸೂರಿನತ್ತ ಹೋಗುತ್ತಿದ್ದ ತರಕಾರಿ ಲಾರಿ ಮತ್ತು ಗೋಣಿಕೊಪ್ಪಲಿನಿಂದ ಬಿ.ಶೆಟ್ಟಿಗೇರಿಯತ್ತ ಬರುತ್ತಿದ್ದ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓಮ್ನಿಯಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಓಮ್ನಿ ನಜ್ಜುಗುಜ್ಜಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.