






ಸಿದ್ದಾಪುರ NEWS DESK ಏ.18 : ಹುಲಿ ದಾಳಿಗೆ ಒಂದೂವರೆ ವರ್ಷದ ಕರುವೊಂದು ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ. ಗ್ರಾಮದ ಸಿ.ಟಿ.ಪೊನ್ನಪ್ಪ ಎಂಬುವವರಿಗೆ ಸೇರಿದ ಕರು ಇದಾಗಿದ್ದು, ಮೇಯಲು ಬಿಟ್ಟ ಸಂದರ್ಭ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಕಳೆದ ಒಂದು ತಿಂಗಳಲ್ಲಿ ಮಾಲ್ದಾರೆ ಮತ್ತು ಚೆನ್ನಯ್ಯನ ಕೋಟೆ ಗ್ರಾಮ ವ್ಯಾಪ್ತಿಯಲ್ಲಿ ಐದು ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ. ಜೀವಭಯದಲ್ಲಿರುವ ಈ ಭಾಗದ ಜನ ಅರಣ್ಯ ಇಲಾಖೆ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಹುಲಿಯನ್ನು ಶೀಘ್ರ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ. ಹುಲಿಯ ಚಲನವಲನ ಪರಿಶೀಲಿಸಲು ಕ್ಯಾಮರಾ ಅಳವಡಿಸಲಾಗಿದ್ದು, ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶನಿವಾರವೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆರ್.ಎಫ್.ಒ ಗಂಗಾಧರ್ ನೇತೃತ್ವದಲ್ಲಿ ಡಿಆರ್ಎಫ್ಒ ಶಶಿ, ರಾಜೇಶ್, ವಾಚರ್ ಸುನಿಲ್, ಆರ್ಆರ್ಟಿ ತಂಡದ ಶಂಕರ್, ಮುತ್ತ, ರಂಜಿತ್, ಭರತ್, ರೋಷನ್, ಪ್ರದೀಪ್ ಇದ್ದರು.