Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಉಳುವಂಗಡ ಕಾವೇರಿಗೆ ಕನ್ನಡ ಬಹುಭಾಷಾ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಉಳುವಂಗಡ ಕಾವೇರಿಗೆ ಕನ್ನಡ ಬಹುಭಾಷಾ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ*

ಏಪ್ರಿಲ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.20 NEWS DESK : ಕೊಡಗಿನ ಸಾಹಿತಿ ಟಿ.ಶೆಟ್ಟಿಗೇರಿಯ ಉಳುವಂಗಡ ಕಾವೇರಿ ಉದಯ ಅವರಿಗೆ ದಾವಣಗೆರೆಯಲ್ಲಿ ಕನ್ನಡ ಬಹುಭಾಷಾ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾಧರ ಕನ್ನಡ ಪ್ರತಿಷ್ಠಾನ, ದಾವಣಗೆರೆ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಸ್ಫೂರ್ತಿ ಪ್ರಕಾಶನ ತೆಲಿಗಿ, ಜ್ಞಾನ ಪ್ರಕಾಶನ ಮತ್ತು ಜ್ಞಾನ ಪ್ರಕಾಶನ ಸಂಸ್ಥೆಯ ವತಿಯಿಂದ ಮಾತೋಶ್ರೀ ಜಾನಕಿಬಾಯಿ ರಂಗರಾವ ಮುತಾಲಿಕ ದೇಸಾಯಿ ಸಂಸ್ಮರಣೆಯ ಅಂಗವಾಗಿ ದಾವಣಗೆರೆಯ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ನಡೆದ ಕನ್ನಡ ನುಡಿತೇರು ಕಾರ್ಯಕ್ರಮದಲ್ಲಿ ವಿದ್ಯಾಧರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ವಿದ್ಯಾಧರ ಮುತಾಲಿಕ ದೇಸಾಯಿ ಅವರು ಉಳುವಂಗಡ ಕಾವೇರಿ ಉದಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ದಾವಣಗೆರೆಯ ಸ್ಫೂರ್ತಿ ಪ್ರಕಾಶನದ ಅಧ್ಯಕ್ಷ ಎಂ.ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ ಉದ್ಘಾಟಿಸಿದರು.
*ಉಳುವಂಗಡ ಕಾವೇರಿ ಉದಯ*
*ಕಿರುಪರಿಚಯ*
ಟಿ.ಶೆಟ್ಟಿಗೇರಿ ನಿವಾಸಿ ಚಂಗುಲಂಡ ಸಿ ಮಾದಪ್ಪ ಸರಸ್ವತಿ ದಂಪತಿಗಳ ಪುತ್ರಿಯಾಗಿ 18/5/1969ರಲ್ಲಿ ಜನಿಸಿ ಪುತ್ತೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿ 29/11/1990 ರಲ್ಲಿ ಉಳುವಂಗಡ ಯು. ಉದಯ ಅವರನ್ನು ವಿವಾಹವಾದ ಇವರಿಗೆ ಲಿಖಿತ್, ಅಮಿತ್ ಎಂಬ ಇಬ್ಬರು ಪುತ್ರರು ಮತ್ತು ಪೂಜಿತ, ಗಾಯನ ಎಂಬ ಇಬ್ಬರು ಸೊಸೆ ಇರುವರು. ಬಹುಭಾಷಾ ಸಾಹಿತಿ, ಕವಯಿತ್ರಿಯಾಗಿರುವ ಇವರು ಹವ್ಯಾಸಿ ರಂಗ ಕಲಾವಿದೆ ಮತ್ತು ಚಿತ್ರಕಲಾವಿದೆಯು ಆಗಿರುವರು. ಕನ್ನಡ, ಕೊಡವ, ಇಂಗ್ಲಿಷ್,  ಹಿಂದಿ ಮತ್ತು ಮಲಯಾಳ ಈ ಐದು ಭಾಷೆಯಲ್ಲಿ, ಕಥೆ, ಕವನ, ಕಾದಂಬರಿ, ಮುಕ್ತಕ, ಜೀವನ ಚರಿತ್ರೆ, ಭಕ್ತಿ ಪ್ರಧಾನ, ಲಲಿತ ಪ್ರಬಂಧ, ನಾಟಕ ಹೀಗೆ ಇವರು ಬರೆದ ಒಟ್ಟು 32 ಕೃತಿಗಳು ಲೋಕಾರ್ಪಣೆಗೊಂಡಿವೆ. ಆರು ಭಾಷೆಯಲ್ಲಿ ಕವನ ವಾಚನ ಮಾಡಿರುವರು.
ಕನ್ನಡ ಸಾಹಿತ್ಯ ಪರಿಷತ್ತು ಶ್ರೀಮಂಗಲ ಹೋಬಳಿಯ ಅಧ್ಯಕ್ಷೆ, ಸಿರಿಗನ್ನಡ ವೇದಿಕೆ ಕೊಡಗು ಜಿಲ್ಲೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ , ಗುರುಕುಲ ಕಲಾ ಪ್ರತಿಷ್ಠಾನ ಕೊಡಗು ಜಿಲ್ಲಾ ಘಟಕದ ಗೌರವಾಧ್ಯಕ್ಷೆ , ಹಾಗು ಕರ್ನಾಟಕ ಲೇಖಕಿಯರ ಸಂಘ ಕೊಡಗು ಶಾಖೆಯ ಉಪಾಧ್ಯಕ್ಷೆ ಆಗಿರುವರು.
ಇವರು ಬರೆದ ಕಾದಂಬರಿ ಕೊಡವ ಸಿನಿಮಾ ಆಗಿದೆ. ಹಾಗು ಸಣ್ಣ ಕಥೆ ಕಿರುಸಿನೆಮ ಆಗಿದೆ. ಇವರು ಬರೆದ ಹಾಡುಗಳನ್ನು ಹಲವಾರು ಗಾಯಕರು ಹಾಡಿರುವರು. ಮಡಿಕೇರಿ ಆಕಾಶವಾಣಿಯ ಸುಪ್ರಭಾತದಲ್ಲಿ ಇವರು ಬರೆದ ಹಾಡು ನಿರಂತರ ಪ್ರಸಾರವಾಗುತ್ತಿದೆ.
ಮೈಸೂರು ದಸರಾ ಕವಿಗೋಷ್ಟಿಯಲ್ಲಿ ಕೊಡವ ಮತ್ತು ಕನ್ನಡ ಹೀಗೆ ಎರಡು ಬಾರಿ ಕವನ ವಾಚನ ಮಾಡಿರುವರು. ಹಲವಾರು ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿರುವರು. ವಿವಿಧ ಕಾರ್ಯಕ್ರಮಗಳಲ್ಲಿ ವಿಚಾರ ಮಂಡನೆ ಮಾಡಿರುವರು. ಪೌರಾಣಿಕ , ಸಾಮಾಜಿಕ ನಾಟಕಗಳನ್ನು ಬರೆದು ಮಹಿಳೆಯರಿಗೆ ನಾಟಕ ನಿರ್ದೇಶನ ಮಾಡಿ, ಮುಖ್ಯ ಪಾತ್ರವಹಿಸಿ ಹಲವಾರು ಕಾರ್ಯಕ್ರಮಗಳಲ್ಲಿ ಪ್ರದರ್ಶನಗಳನ್ನು ನೀಡಿರುವರು. 2022 ನೆ ಸಾಲಿನ ಕರ್ನಾಟಕ ಸರ್ಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ, ಗುರುಕುಲ ಕಲಾಪ್ರತಿಷ್ಠಾನದಿಂದ ಗುರುಕುಲ ಶಿರೋಮಣಿ ಪ್ರಶಸ್ತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಪುಸ್ತಕ ಪ್ರಶಸ್ತಿ, ನಾಡಿನ ಸಮಾಚಾರ ದಿನಪತ್ರಿಕೆಯಿಂದ ಸಾಹಿತ್ಯ ರತ್ನ ಮತ್ತು ಸಾಹಿತ್ಯ ತಪಸ್ವಿ ಪ್ರಶಸ್ತಿ, ಮೈಸೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಬಹುಭಾಷಾ ಸಾಹಿತ್ಯ ಚೇತನ ಪ್ರಶಸ್ತಿ, ವಿದ್ಯಾಧರ ಕನ್ನಡ ಪ್ರತಿಷ್ಠಾನದಿಂದ ಕನ್ನಡ ಬಹುಭಾಷಾ ಸಾಹಿತ್ಯ ಸಿರಿ ಪ್ರಶಸ್ತಿ, ಇಂಟನ್ರ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಹೀಗೆ ಒಟ್ಟು ಒಂಬತ್ತು ಪ್ರಶಸ್ತಿ ಪಡೆದಿರುವರು. ಸಾಹಿತ್ಯ ಸೇವೆಗಾಗಿ ಇದುವರೆಗೆ ಇವರಿಗೆ 23 ಸಂಘ ಸಂಸ್ಥೆಗಳು ಸನ್ಮಾನ ಮಾಡಿವೆ.
*ಇವರ ವಿಳಾಸ*
ಉಳುವಂಗಡ ಕಾವೇರಿ ಉದಯ
ಟಿ.ಶೆಟ್ಟಿಗೇರಿ ಗ್ರಾಮ ಅಂಚೆ
ಪೊನ್ನಂಪೇಟೆ ತಾಲೂಕು
ಕೊಡಗು ಜಿಲ್ಲೆ 571249
ಮೊ: 9591366296

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ನಿಧನ ಸುದ್ದಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಹಿರಿಕರ ಗ್ರಾಮ ನಿವಾಸಿ ಹೆಚ್.ಡಿ.ಲತ(58) ನಿಧನರಾಗಿದ್ದಾರೆ. ಮೃತರು ಪತಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.…

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.