ಮಡಿಕೇರಿ ಏ.24 NEWS DESK : ಕೊಡಗು ಜಿಲ್ಲಾ ಕುಲಾಲ(ಕುಂಬಾರ) ಸಂಘದ ವತಿಯಿಂದ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕ ಸಹಯೋಗದೊಂದಿಗೆ ಸಮಾಜ ಬಾಂಧವರ ಸಮ್ಮಿಲನ ಮತ್ತು ಕ್ರೀಡೋತ್ಸವ ಏ.26 ಮತ್ತು 27 ರಂದು ಮಡಿಕೇರಿಯ ನಡೆಯಲಿದೆ ಎಂದು ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್ ಕುಲಾಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬಾರ ಬಾಂಧವರ ಸಂಘಟನೆಗಾಗಿ ಪ್ರಪ್ರಥಮ ಬಾರಿಗೆ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜನಾಂಗಬಾಂಧವರ ಸಮ್ಮಿಲನ ಮತ್ತು ಕ್ರೀಡಾಕೂಟಕ್ಕೆ 5000ಕ್ಕೂ ಅಧಿಕ ಸಂಖ್ಯೆಯಲ್ಲಿ ಸಮಾಜಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು. ಏ.26ರಂದು ಬೆಳಗ್ಗೆ 6.30 ಗಂಟೆಗೆ ನಗರದ ಓಂಕಾರೇಶ್ವ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಕ್ರೀಡಾಜ್ಯೋತಿಗೆ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಚಾಲನೆ ನೀಡಲಿದ್ದು, 7 ಗಂಟೆಗೆ ಪುರುಷರ ಕ್ರಿಕೆಟ್ ಪಂದ್ಯಾವಳಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು. ಏ.27ರಂದು ಸಂಜೆ 4 ಗಂಟೆಗೆ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ ಮೂಲ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಸಂಘದ ಸ್ಥಾಪಕ ಅಧ್ಯಕ್ಷ ಮುತ್ತಮ್ಮ ಕೋಟಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ಗೌಡ, ಎಂಎಲ್ಸಿ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಚಲಚಿತ್ರ ನಟರಾದ ಭುವನ್ ಪೊನ್ನಣ್ಣ, ಹರ್ಷಿಕಾ ಪೂಣಚ್ಚ, ಜಿಲ್ಲಾ ಗ್ರಾಹಕರ ನ್ಯಾಯಾಲಯದ ನ್ಯಾಯಾದೀಶೆ ರೇಣುಕಾಂಬ, ಅಖಿಲ ಭಾರತೀಯ ಗ್ರಾಹಕರ ಕಲ್ಯಾಣ ಪರಿಷತ್ತಿನ ರಾಜ್ಯಾಧ್ಯಕ್ಷ ಎಂ.ಪಿ.ಹರ್ಷ, ಸಂಘದ ಉಪಾಧ್ಯಕ್ಷ ಕೆ.ಕೆ.ದಾಮೋದರ್, ಪ್ರಮುಖರಾದ ಮಯೂರ್ ಉಳ್ಳಾಲ್, ಡಾ.ಮಂಜಪ್ಪ ಶರಣರು, ಕೆ.ಎಂ.ಚಿನ್ನಪ್ಪ, ಎಂ.ಡಿ.ನಾಣಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಯುವ ಘಟಕದ ಕಾರ್ಯದರ್ಶಿ ಎಂ.ಪಿ.ಪವನ್ ಮಾತನಾಡಿ, ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ, ಭಾರದ ಗುಂಡು ಎಸೆತ, ಗೋಣಿಚೀಲ ಓಟ, ಮೂರು ಕಾಲಿನ ಓಟ, 100, 200 ಮೀಟರ್ ಓಟ, ವೇಗದ ನಡಿಗೆ, ಬಾಲ್ ಪಾಸಿಂಗ್ ಸ್ಪರ್ಧೆ ನಡೆಯಲಿದೆ. ಮಹಿಳೆಯರ ವಿಭಾಗದಲ್ಲಿ ರಂಗೋಲಿ, ಸಂಗೀತ ಕುರ್ಚಿ, ಹಗ್ಗಜಗ್ಗಾಟ, ಬಾಂಬ್ ಇನ್ ದ ಸಿಟಿ, ನಿಂಬೆ ಚಮಚ, ಸೂಜಿಗೆ ದಾರ, ಭಾರದ ಗುಂಡು ಎಸೆತ, ಗೋಣಿಚೀಲದ ಓಟ, ಬಕೇಟಿಕೆ ಚೆಂಡು ಹಾಕುವುದು, ಸಂಗೀತ ಕುರ್ಚಿ, ಮೂರು ಕಾಲಿನ ಓಟ, 100, 200 ಮೀ ಓಟ, ವಾಟರ್ ಪಾಸಿಂಗ್ ಬಾಲ್ ವೇಗದ ನಡಿಗೆ ಸೇರಿದಂತೆ ಮಕ್ಕಳಿಗೆ 50,100 ಮೀ ಓಟ, ಕಾಳು ಹೆಕ್ಕುವುದು, ಮೆಮೊರಿ ಗೇಮ್, ಕಪ್ಪೆ ಜಿಗಿತ, ಚಕ್ಕುಲಿ ತಿನ್ನುವ ಸ್ಪರ್ಧೆ, ಸೂಜಿಗೆ ದಾರ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಆಕರ್ಷಕ ಟ್ರೋಪಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಹೆಚ್ಚಿನ ಮಾಹಿತಿಗೆ 8050437179 ಸಂಪರ್ಕಿಸುವಂತೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಘಟಕದ ಪದಾಧಿಕಾರಿಗಳಾದ ಎಂ.ಪಿ.ಅರುಣ್ ಕುಮಾರ್, ಕೆ.ಎಸ್.ಮುರಳಿ ಮೋಹನ, ಕೆ.ವಿ.ಪುರುಷೋತ್ತಮ್, ಆರ್.ಜಯಪ್ರಕಾಶ್ ಕುಲಾಲ್ ಉಪಸ್ಥಿತರಿದ್ದರು.











