ಮಡಿಕೇರಿ NEWS DESK ಏ.26 : ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ನಮ್ಮ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು. ನಗರದ ಮಹದೇವಪೇಟೆಯಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಕರೆ ನೀಡಿದರು. ಉಮ್ಮತ್ ಒನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ.ಬಿ.ಬಶೀರ್, ಪ್ರಧಾನ ಕಾರ್ಯದರ್ಶಿ ಪಿ.ಕೆ.ಖಾಲಿದ್, ಕೋಶಾಧಿಕಾರಿ ಅಬ್ದುಲ್ ಹಮೀದ್ ಫೈಝಿ, ಟ್ರಸ್ಟಿಗಳಾದ ಎಂ.ಯು.ಅಬ್ದುಲ್ ಮಜೀದ್, ಕೆ.ಎಂ.ಹನೀಫ್ ಹಾಗೂ ಒ.ಹೆಚ್.ಸಿದ್ಧಿಕ್ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.











