
ನಾಪೋಕ್ಲು ಮೇ 3 NEWS DESK : ತನ್ನದೇ ಆದ ಆಚಾರ, ವಿಚಾರ, ಸಂಸ್ಕೃತಿ, ಸಂಪ್ರದಾಯಗಳನ್ನು ರೂಡಿಸಿಕೊಂಡಿರುವ ಗೊಲ್ಲ ಜನಾಂಗದವರ ವಾರ್ಷಿಕ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಹೆಮ್ಮೆ ಅನಿಸಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕೊಡಗು ಜಿಲ್ಲಾ ಗೊಲ್ಲ ಸಮಾಜದ ವತಿಯಿಂದ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಉದ್ಘಾಟಿಸಿ ಮಾತನಾಡಿದರು. ಇಂದು ಜಿಲ್ಲೆಯಲ್ಲಿ ಸಣ್ಣ ಸಣ್ಣ ಸಮುದಾಯದವರು ವ್ಯವಸ್ಥಿತವಾಗಿ ಕ್ರೀಡಾಕೂಟವನ್ನು ಸಂಘಟಿಸುತ್ತಿದ್ದಾರೆ. ಇದು ಸಂತಸದ ವಿಚಾರ. ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ಸಣ್ಣ ಸಮುದಾಯದವರು ತಮ್ಮದೇ ಆದ ಸಂಸ್ಕೃತಿ, ಉಡುಪು, ಭಾಷೆ, ಆಚಾರ ವಿಚಾರಗಳನ್ನು ಹೊಂದಿದ್ದಾರೆ. ಅವುಗಳನ್ನು ಕಾಪಾಡುವ ಕೆಲಸ ಆಗಬೇಕಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ವಿವಿಧ ಸಮುದಾಯಗಳ ಕ್ರೀಡಾಕೂಟಗಳು ಜರುಗುತ್ತಿವೆ. ಕ್ರೀಡಾಕೂಟಗಳ ಮೂಲಕ ಸಂಘಟನೆ ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಯಲ್ಲಿ ಎಲ್ಲಾ ಜನಾಂಗದವರ ಕಾರ್ಯಕ್ರಮಗಳಿಗೆ ತಾನು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಗೊಲ್ಲ ಸಮಾಜದ ಪ್ರಮುಖರು ತಮ್ಮ ಸಮಾಜದ ಹಲವು ಪ್ರಮುಖ ಬೇಡಿಕೆಗಳ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು ಹಾಗೂ ಶಾಸಕರನ್ನು ಸನ್ಮಾನಿಸಿ ಗೌರವಿಸಿ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷರಾದ ಅರೆಯಂಡ ಎ ಭೀಮಯ್ಯ, ಕ್ರೀಡಾ ಸಮಿತಿ ಅಧ್ಯಕ್ಷ ತುತ್ತಿಯoಡ ಅಜoತ್ ನಾಣಯ್ಯ, ಮಾಜಿ ಸೈನಿಕ ಕೈಬ್ಲಿರ ಎಂ ಭೀಮಯ್ಯ, ಕಾಫಿ ಬೆಳಗಾದ ಉದ್ದಮಾಡಂಡ ಕೆ.ಕಾಶಿ ಭೀಮಯ್ಯ, ಚೋಕಿರ ವಾಸುದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಸಂಪನ್ ಅಯ್ಯಪ್ಪ ಕ್ರೀಡಾಕೂಟದ ಸಮಿತಿಯ ಪದಾಧಿಕಾರಿಗಳು, ಜನಾಂಗಬಾದವರು ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಶಾಸಕರನ್ನು ಮಹಿಳೆಯರು ಸಾಂಪ್ರದಾಯಿಕ ಉಡುಪಿನೊಂದಿಗೆ ತಲಿಯಕ್ಕಿ ಬೋಳಕ್ ನೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು. ಕ್ರೀಡಾಕೂಟದಲ್ಲಿ ಮೊದಲಿಗೆ ಪುರುಷರ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾದ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ. ಶಾಲಾ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕ್ರೀಡಾಕೂಟದ ಸಮಗ್ರ ಮಾಹಿತಿಯನ್ನು ಕ್ರೀಡಾ ಸಮಿತಿ ಅಧ್ಯಕ್ಷ ತೊತ್ತಿಯಂಡ ಅಜಂತ್ ನಾಣಯ್ಯ ನೀಡಿದರು. ಕ್ರಿಕೆಟ್ ಪಂದ್ಯಾಟದ ಪ್ರಥಮ ಬಹುಮಾನದ ಟ್ರೋಫಿಯನ್ನು ಮಾಜಿ ಸೈನಿಕ ಪೆÇನ್ನುಕಂಡ ಗಣೇಶ್ ಬೆಳ್ಳಿಯಪ್ಪ, ಪ್ರಾಯೋಜಿಸಿದ್ದಾರೆ. ದ್ವಿತೀಯ ಬಹುಮಾನದ ಟ್ರೋಫಿಯನ್ನು ಕೋಡಿಯಂಡ ಶಶಿಕಾಂತ ತಿಮ್ಮಯ್ಯ ಪ್ರಯೋಜಿಸಿದ್ದಾರೆ. ಹಗ್ಗ ಜಗ್ಗಾಟ ಪಂದ್ಯದ ಪ್ರಥಮ ಬಹುಮಾನದ ಟ್ರೋಫಿಯನ್ನು ಯುವನಟ ತೊತ್ತಿಯಂಡ ಕಿರಣ್ ಸೋಮಣ್ಣ ಪ್ರಾಯೋಜಿಸಿದ್ದಾರೆ. ದ್ವಿತೀಯ ಬಹುಮಾನದ ಟ್ರೋಫಿಯನ್ನು ಅರೆಯಂಡ ಕಾಳಪ್ಪ ಪ್ರಾಯೋಜಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಕೈಬ್ಲಿರ ಕಿಷನ್ ಉತ್ತಪ್ಪ ಪಂದ್ಯಾಟದ ಚೆಂಡು ಹಾಗೂ ಸ್ಟಂಪ್ ಗಳನ್ನು ಒದಗಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.








