Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕನ್ನಡ ಹಬ್ಬ :  ಸಾಹಿತ್ಯ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖ : ಟಿ.ಪಿ.ರಮೇಶ್* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕನ್ನಡ ಹಬ್ಬ :  ಸಾಹಿತ್ಯ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖ : ಟಿ.ಪಿ.ರಮೇಶ್* 

ಮೇ 6, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 6 NEWS DESK : ಸಾಹಿತ್ಯ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳು. ಒಂದರ ಅಂತಃಸ್ವರೂಪ ಇನ್ನೊಂದರಲ್ಲಿ ವ್ಯಕ್ತವಾಗುವುದರಿಂದ ಒಂದು ಇನ್ನೊಂದಕ್ಕೆ ಪೂರಕ ವಾಗಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಹೇಳಿದ್ದಾರೆ.  ನಗರದ ರೆಡ್ ಬ್ರಿಕ್ಸ್ ಸಭಾಂಗಣದಲ್ಲಿ ನಡೆದ ಸಮರ್ಥ ಕನ್ನಡಿಗರು ಕೊಡಗು ಮತ್ತು ದಿ.ಚಂದ್ರಶೇಖರ ರಾವ್ ಮೆಮೋರಿಯಲ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ ಕನ್ನಡ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದ ನಾನಾ ದೇಶಗಳಲ್ಲಿ ಭಾರತ ಇಂದು ವಿಜೃಂಭಿಸಲು ಪ್ರಮುಖ ಕಾರಣವೇ ನಮ್ಮ ಸಂಸ್ಕೃತಿಯಾಗಿದೆ. ಲಿಪಿಯ ಮೂಲಕ ಭಾವನೆಗಳನ್ನು ಅಭಿವ್ಯಕ್ತಿಗೊಳಿಸುವ ಕಲೆಯನ್ನು ಮನುಷ್ಯ ರೂಢಿಸಿಕೊಂಡದ್ದು ಸಂಸ್ಕೃತಿಯ ವಿಕಾಸದಲ್ಲಿ ಬಹು ದೊಡ್ಡ ಹೆಜ್ಜೆಯಾಗಿದೆ. ನಮ್ಮ ಭಾಷೆ ಸಂಸ್ಕೃತಿ ಬೆಳೆಯಲು ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದೂ ಅವರು ಹೇಳಿದರು. ಈ ನಿಟ್ಟಿನಲ್ಲಿ ಕೊಡಗಿನ ಸಮರ್ಥ ಕನ್ನಡಿಗರು ಸಂಸ್ಥೆಯ ಮಹಿಳಾ ಮಣಿಗಳ ಕಾರ್ಯವನ್ನು ರಮೇಶ್ ಶ್ಲಾಘಿಸಿದರು. ಎರಡು ಕೃತಿಗಳನ್ನು ಲೋಕಾರ್ಪಣೆ ಮಾಡಿದ ಮಡಿಕೇರಿ ಆಕಾಶವಾಣಿಯ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಮಾತನಾಡಿ, ಕೊಡಗು ಮತ್ತು ಮುಂಬಯಿ ನಡುವಿನ ಬಾಂಧವ್ಯ ಬಹಳ ಹಳೆಯದು. ಅದಕ್ಕೆ ಕನ್ನಡದ ಮೊದಲ ಗ್ರಂಥ ಕವಿರಾಜಮಾರ್ಗದಲ್ಲೆ ಆಧಾರ ಇದೆ. ಈ ಕಾರ್ಯಕ್ರಮ ಬಾಂಧವ್ಯದ ಬೆಸುಗೆಗೊಂದು ಸಂಕೇತವಾಗಿದೆ ಎಂದರಲ್ಲದೇ, ದೇಶಸೇವೆ, ಸೈನಿಕ ಸೇವೆಯ ಜೊತೆಗೆ ಸಾಹಿತ್ಯ ರಂಗದಲ್ಲೂ ಕೊಡಗು ಉತ್ತಮ ಸಾಧನೆ ತೋರುತ್ತಿದೆ” ಎಂದೂ ಶ್ಲಾಘಿಸಿದರು. ಹಿರಿಯ ಲೇಖಕ ಕಿಗ್ಗಾಲು ಗಿರೀಶ್ ಅವರ ಕೆಲವು ರಚನೆಗಳನ್ನು ಸುಬ್ರಾಯ ಸಂಪಾಜೆ ಗಮಕ ರೂಪದಲ್ಲಿ ಹಾಡಿದರು. ಕಾಯ೯ಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಕೊಡಗು ಪತ್ರಕತ೯ರ ಸಂಘ (ರಿ)ದ ಅಧ್ಯಕ್ಷ ಅನಿಲ್ ಹೆಚ್.ಟಿ,, ಕನ್ನಡಿಗರು ದೇಶದ ಯಾವುದೇ ಭಾಗದಲ್ಲಿದ್ದರೂ ಕನ್ನಡ ಭಾಷೆಗೆ ಅವರೆಲ್ಲರ ಬಾಂಧವ್ಯ ಬೆಸೆಯುವ ಶಕ್ತಿಯಿದೆ. ಭಾಷೆ ಎಂಬುದು ಭಾವನೆಗಳನ್ನು ಬೆಸೆಯುವ ಕೊಂಡಿಯಂತಿದೆ ಎಂದರಲ್ಲದೇ, ಮುಂಬೈನ ಕನ್ನಡ ಪರ ಸಂಸ್ಥೆಯೊಂದು ದೂರದ ಮಡಿಕೇರಿಯಲ್ಲಿ ಕನ್ನಡ ಹಬ್ಬಕ್ಕೆ ಸಹಯೋಗ ನೀಡಿರುವುದೇ ಈ ಬೆಸುಗೆಗೆ ಸಾಕ್ಷಿಯಾಗಿದೆ ಎಂದು ಶ್ಲಾಘಿಸಿದರು.  ಮೂಲತ ಮಡಿಕೇರಿಯವರಾದ ಶ್ರೀದೇವಿ ಸಿ. ರಾವ್ ಅವರು ತನ್ನ ದಿ. ಪತಿ ಚಂದ್ರಶೇಖರ ರಾವ್ ಹೆಸರಲ್ಲಿ ಟ್ರಸ್ಟ್ ಪ್ರಾರಂಭಿಸಿ ಆ ಮೂಲಕ ಮುಂಬೈನಲ್ಲಿ ಸಾಹಿತ್ಯಾಸಕ್ತರೊಂದಿಗೆ ನಾನಾ ಕನ್ನಡ ಪರ ಕಾಯ೯ಕ್ರಮಗಳನ್ನು ಆಯೋಜಿಸುತ್ತಿರುವುದು ಕೊಡಗಿಗೇ ಹೆಮ್ಮೆಯಾಗಿದೆ ಎಂದೂ ಅನಿಲ್ ಹೇಳಿದರು. ಎಲ್ಲಾದರೂ ಇರು, ಎಂಥಾದರು ಇರು, ಸದಾ ನೀ ಕನ್ನಡಿಗನಾಗಿರು ಎಂಬ ಕವಿವಾಣಿಯಂತೆ ಮುಂಬೈನಲ್ಲಿದ್ದುಕೊಂಡು ಕನ್ನಡ ಪರವಾದ ಚಿಂತನೆಗಳನ್ನು ಹೊಂದಿರುವ ಸಾಹಿತ್ಯಾಸಕ್ತರು ಮಾದರಿಯಾಗಿದ್ದಾರೆ ಎಂದೂ ಅನಿಲ್ ಹೆಚ್.ಟಿ ಹೇಳಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಮುಂಬೈಯ ಸಾಹಿತಿ ಗೋಪಾಲ ತ್ರಾಸಿ ಶ್ರೀದೇವಿ ಸಿ ರಾವ್ ರವರ ಚಿಂತನೆ ಮತ್ತು ಅವರ ಸಮಾಜ ಮುಖೀ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮ “ನುಡಿ ತೇರು ” ಕೃತಿ ಕೊಡಗಿನ ನೆಲದಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಬಗ್ಗೆ ಸಂತೋಷವಾಗುತ್ತಿದೆ ಎಂದರು. ಮುಂಬೈನ ದಿ. ಚಂದ್ರಶೇಖರ ರಾವ್ ಮೆಮೋರಿಯಲ್ ಟ್ರಸ್ಟ್ ನ ಮುಖ್ಯಸ್ಥೆ ಶ್ರೀದೇವಿ ಸಿ ರಾವ್ ಮಾತನಾಡಿ, ಕನ್ನಡ ಸಾಹಿತ್ಯ ಸೇವೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ತಮ್ಮ ಕೈಲಾದ ಸೇವೆಯನ್ನು ತನ್ನ ದಿವಂಗತ ಪತಿ ಚಂದ್ರಶೇಖರ ರಾವ್ ಸ್ಮರಣಾಥ೯ ಕೈಗೊಳ್ಳುವುದಾಗಿ ಹೇಳಿದರು. ಹರಟೆ ಕೃತಿಯ ಬಗ್ಗೆ ಮುಂಬೈ ಯ ಲೇಖಕಿ ಡಾ. ಕುಸುಮ ಮಾತನಾಡಿದರೆ ನುಡಿ ತೇರು ಕೃತಿಯ ಬಗ್ಗೆ ಮಂಡ್ಯದ ಲೇಖಕಿ ಶ್ವೇತಾ ಮಾತನಾಡಿದರು. ವೇದಿಕೆಯಲ್ಲಿ ಚಂದ್ರಶೇಖರ ರಾವ್ ಮೆಮೋರಿಯಲ್ ಟ್ರಸ್ಟ್ ನ ಉಪಾಧ್ಯಕ್ಷ ಪ್ರತಾಪ್ ಉಪಸ್ಥಿತರಿದ್ದರು. ಕೊಡಗಿನ ಸಮರ್ಥ ಕನ್ನಡಿಗರು ಸಂಸ್ಥೆಯ ಪ್ರಧಾನ ಸಂಚಾಲಕಿ ಜಯಲಕ್ಷ್ಮಿ ಸ್ವಾಗತಿಸಿದರು.

ಸನ್ಮಾನದ ಗೌರವ ::  ಈ ಸಂದರ್ಭದಲ್ಲಿ ಕನ್ನಡ ಸೇವೆ ಹಾಗೂ ನಿರೂಪಣಾ ಕೌಶಲ್ಯಕ್ಕಾಗಿ ಮಡಿಕೇರಿಯ ಮುನೀರ್ ಅಹಮ್ಮದ್ ಅವರಿಗೆ ಸಮರ್ಥ ಕನ್ನಡಿಗರು ಸಂಸ್ಥೆ “ವಾಗ್ಭೂಷಣ ” ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಾಜ ಸೇವೆಗಾಗಿ ಪುಷ್ಪಾ ಕೃಷ್ಣಾನಂದ ಶೇಟ್ ಅವರಿಗೆ ” ಸಮಾಜ ಸೇವಾ ರತ್ನ “, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಗೋಪಾಲ ತ್ರಾಸಿಯವರಿಗೆ ”ಕನ್ನಡ ಕಲಾ ರತ್ನ “, ಶಿಕ್ಷಣ ಮತ್ತು ಸಮಾಜಸೇವೆಗಾಗಿ ಶ್ರೀದೇವಿ ಸಿ ರಾವ್ ಅವರಿಗೆ ಸಮಾಜ ಸೇವಾ ರತ್ನ, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಡಾ. ಕುಸುಮಾ ಅವರಿಗೆ ಕನ್ನಡ ರತ್ನ ” ಎಂದು ಗೌರವಿಸಿ ಸಮರ್ಥ ಕನ್ನಡಿಗರು ಸಂಸ್ಥೆ ವತಿಯಿಂದ ಪುರಸ್ಕಾರ ನೀಡಲಾಯಿತು. ಚಿತ್ರಕಲೆಯಲ್ಲಿ ರಾಜ್ಯ ಮಟ್ಟದ ಸಾಧನೆಗೈದ ಶಿಕ್ಷಣ, ಕಲೆ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸಮಾನ ಆಸಕ್ತಿ ಬೆಳೆಸಿಕೊಂಡ ಬಹುಮುಖ ಪ್ರತಿಭೆ ಸಾತ್ವಿಕ್ ಅಣ್ವೇಕರ್ ನನ್ನು ” ಉದಯ ರವಿ ” ಎಂದು ಗೌರವಿಸಿ ಪುರಸ್ಕಾರ ನೀಡಲಾಯಿತು. ಚಂದ್ರಶೇಖರ ರಾವ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಬಡಮಕ್ಕಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಸಮರ್ಥ ಕನ್ನಡಿಗರು ಸಂಸ್ಥೆಯ ಸಂಚಾಲಕಿಯರಾದ ಚಿತ್ರಾ ಆರ್ಯನ್, ಅರ್ಪಿತಾ ಸಂದೀಪ್ ಮತ್ತು ಶಾಂತಿ ಅಚ್ಚಯ್ಯ ಪ್ರಾರ್ಥಿಸಿದರು. ಸವಿತಾ ರಾಕೇಶ್ ವಂದಿಸಿದ ಕಾಯ೯ಕ್ರಮದ ನಿರೂಪಣೆಯನ್ನು ಕಡ್ಲೇರ ತುಳಸಿ ಮೋಹನ್ ನೆರೇರಿಸಿದರು. ಸಾಂಸ್ಕೃತಿಕ ವೇದಿಕೆಯಲ್ಲಿ ಮೂರ್ನಾಡಿನ ಸೌಮ್ಯ ಭಟ್ ಮಾರ್ಗದರ್ಶನದಲ್ಲಿ ” ಶಿವ ತಾಂಡವ ” ನೃತ್ಯ ಪ್ರದಶಿ೯ತವಾಯಿತು. . ಜನನಿ ಮತ್ತು ತಂಡದ ಆಕರ್ಷಕ ಕೋಲಾಟ ಪ್ರದರ್ಶನ ಜನಮನ ಮನಸೂರೆಗೊಂಡಿತು. ಶ್ರೀರಕ್ಷಾ ಪ್ರಬಾಕರ್ ಗಾಯನ ಪ್ರೇಕ್ಷಕರನ್ನು ಮನರಂಜಿಸಿತು. . ಅವನಿಕಾ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಗೋಪಾಲ ತ್ರಾಸಿಯವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು.ಲೇಖಕಿ ಸ್ಮಿತಾ ಅಮೃತರಾಜ್ ಕಾವ್ಯ ರಚನೆಯ ಬಗ್ಗೆ ಮಾತನಾಡಿ ಕವಿತೆ ವಾಚಿಸಿದರು. ಹತ್ತು ಕವಿಗಳು ಭಾಗವಹಿಸಿದ್ದ ಕವಿಗೋಷ್ಠಿಯನ್ನು ಕೃಪಾ ದೇವರಾಜ್ ನಿವ೯ಹಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.