





ಮಡಿಕೇರಿ ಮೇ 6 NEWS DESK : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶನಿವಾರಸಂತೆ ಬಳಿ ನಡೆದಿದೆ. ಶನಿವಾರಸಂತೆ ಸಮೀಪದ ನಿಡ್ತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚೌಡೇನಹಳ್ಳಿ ಗ್ರಾಮದ ಚಂದನ್(25) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಚಂದನ್ ತನ್ನ ಸ್ನೇಹಿತನೊಂದಿಗೆ ಬೈಕ್ನಲ್ಲಿ ಶನಿವಾರಸಂತೆಯಿಂದ ಚೌಡೇನಹಳ್ಳಿಯ ತನ್ನ ಮನೆಯತ್ತ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ. ಕಾರನ್ನು ನಿಲ್ಲಿಸದೆ ಅದರ ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.