
ಶನಿವಾರಸಂತೆ ಮೇ 8 NEWS DESK : ಕೊಡ್ಲಿಪೇಟೆ ಕಲ್ಲು ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಸತಿಗೃಹವನ್ನು ಮೈಸೂರಿನ ಸೂತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿ ಆಶೀರ್ವದಿಸಿದರು. ಈ ಸಂದರ್ಭ ಕಲ್ಲು ಮಠದ ಶ್ರೀ ಮಹಾಂತ ಸ್ವಾಮೀಜಿ, ಆರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೋದ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸೇರಿದಂತೆ ವಿವಿಧ ಮಠದೀಶರು ಉಪಸ್ಥಿತರಿದ್ದರು.









