




ಕುಶಾಲನಗರ ಮೇ 8 NEWS DESK : ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ವತಿಯಿಂದ ಕುಶಾಲನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕ್ರೀಡಾಂಗಣದಲ್ಲಿ” ಬಿ.ಜಿ.ಎಸ್- ಕಪ್” ಹೊನಲು ಬೆಳಕಿನ ರಾಜ್ಯ ಮಟ್ಟದ ಕಬಡ್ಡಿ ಹಬ್ಬವನ್ನು ಮೇ 13 ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ವೇದಿಕೆಯ ಅಧ್ಯಕ್ಷರಾದ ಎಂ ಡಿ ಕೃಷ್ಣಪ್ಪ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮತ್ತು ಕೊಡಗು ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೇಷನ್ ಕುಶಾಲನಗರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂಸ್ಥೆ ವತಿಯಿಂದ ಕರ್ನಾಟಕ ರಾಜ್ಯ ಮಟ್ಟದ ಸೀನಿಯರ್ಸ್ ಚಾಂಪಿಯನ್ ಶಿಪ್ ರಾಜ್ಯಮಟ್ಟದ ಪ್ರೊ, ಕಬಡ್ಡಿ ಪಂದ್ಯಾಟವನ್ನು ಮೊದಲ ಬಾರಿಗೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಶಾಖ ಮಠಾಧೀಶರಾದ ಶ್ರೀ ಶಂಭುನಾಥ ಸ್ವಾಮೀಜಿ, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಅರಕಲಗೂಡು ಶಾಸಕರಾದ ಎ.ಮಂಜು, ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ, ಬೋಜೇಗೌಡ, ಸೂರಜ್ ರೇವಣ್ಣ, ಮಾಜಿ ಶಾಸಕರಾದ ಅಪ್ಪಚ್ಚುರಂಜನ್, ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ಜಿ. ಮೇದಪ್ಪ, ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಮೇ 13 ರಂದು ನಡೆಸಲು ಉದ್ದೇಶಿಸಿರುವ ಪ್ರೊ. ಕಬಡ್ಡಿ ಕ್ರೀಡಾಕೂಟದ ಅಂಗವಾಗಿ ಸಂಜೆ 4 ಗಂಟೆಗೆ, ಕುಶಾಲನಗರದ ಬೈಚನ ಹಳ್ಳಿಯ ಮಾರಮ್ಮ ದೇವಸ್ಥಾನದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವರೆಗೆ ಕಲಾತಂಡಗಳ ಮೂಲಕ ಬೃಹತ್ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆ ಯಲ್ಲಿ ಮಠಾಧೀಶರು, ಜಿಲ್ಲೆಯ ಸಮುದಾಯ ಬಾಂಧವರು, ಜನಪ್ರತಿನಿಧಿಗಳು, ರಾಜ್ಯಮಟ್ಟದ ಹಲವು ತಂಡಗಳು, ಮತ್ತು ರಾಷ್ಟ್ರೀಯ ಮಟ್ಟದ ಖ್ಯಾತ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ ಸೀನಿಯರ್ ಪುರುಷರ ಕಬಡ್ಡಿ ಚಾಂಪಿಯನ್ ಶಿಪ್ ಮತ್ತು ಕರ್ನಾಟಕ ರಾಜ್ಯ ಮಟ್ಟದ ಮಹಿಳೆಯರ ಕಬಡ್ಡಿ ಆಹ್ವಾನಿತ ತಂಡಗಳು ಭಾಗವಹಿಸಲಿವೆ. ಪುರುಷರ ವಿಜೇತ ತಂಡಗಳಿಗೆ ಮೊದಲನೆಯ ಬಹುಮಾನ ಒಂದು ಲಕ್ಷ ನಗದು, ಮತ್ತು ಆಕರ್ಷಕ ಟ್ರೋಪಿ, ಎರಡನೇ ಬಹುಮಾನ ರೂ.50,000 ಮತ್ತು ಆಕರ್ಷಕ ಟ್ರೋಫಿ, ಮೂರನೇ ಮತ್ತು ನಾಲ್ಕನೇ ಬಹುಮಾನವಾಗಿ ರೂ.25000 ಮತ್ತು ಆಕರ್ಷಕ ಟ್ರೋಪಿ ನೀಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಗಣ್ಯರು ಕುಶಾಲನಗರ ತಾಲೂಕು ಒಕ್ಕಲಿಗ ಯುವ ವೇದಿಕೆಯನ್ನು ಉದ್ಘಾಟಿಸಲಿದ್ದಾರೆ ಎಂದು ಕೃಷ್ಣಪ್ಪ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಶೇಖರ ಹೇರೂರು, ಅವಿನಾಶ್, ಜೈ ರಾಜ್, ಸುನಿಲ್ ಕುಮಾರಪ್ಪ, ಕಿರಣ್ ಹನುಮರಾಜ್ ಇದ್ದರು.