




ಮಡಿಕೇರಿ ಮೇ 8 NEWS DESK : ಮೈಸೂರು ಜಿಲ್ಲೆ ಯಾದವಗಿರಿಯ ಕೆಆರ್ಎಸ್ ರಸ್ತೆಯಲ್ಲಿರುವ ದಿ ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘದ ವಾರ್ಷಿಕ ವಿಶೇಷ ಸರ್ವ ಸದಸ್ಯರ ಸಭೆಯು ಸಂಘದ ಕಚೇರಿ ಆವರಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಫಿ ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮೈಸೂರು ಕಾಫಿ ಸಂಸ್ಕಾರಣ ಸಹಕಾರ ಸಂಘವು ಈ ಭಾಗದ ಹಾಗೂ ಸುತ್ತಮುತ್ತಲಿನ ಕಾಫಿ ಬೆಳೆಯುವ ಪ್ರದೇಶಗಳ ರೈತರಿಗೆ ಬಹುದೊಡ್ಡ ವರದಾನವಾಗಿದ್ದು, ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಸಂಘದ ಕಾರ್ಯ ಚಟುವಟಿಕೆಗಳನ್ನು, ಕಳೆದ ಒಂದು ವರ್ಷದಿಂದ ವಿಶೇಷ ಆಸಕ್ತಿ ಹಾಗೂ ಪ್ರಯತ್ನದಿಂದ ಮತ್ತೆ ಕಾರ್ಯ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳುವಂತಾಗಲು ಸಂಘದ ಎಲ್ಲಾ ಸದಸ್ಯರು ಅತ್ಯಂತ ನಿಷ್ಠೆಯಿಂದ ತಮ್ಮ ಕಾರ್ಯಗಳನ್ನು ಮಾಡುವುದಲ್ಲದೆ ಸಂಘದ ಬಲವರ್ಧನೆಗೆ ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘದ ಉಪಾಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಹಾಗೂ ಇಲ್ಲಿವರೆಗಿನ ವರದಿಯನ್ನು ಮಂಡಿಸಲಾಯಿತು.