




ಮಡಿಕೇರಿ ಮೇ 10 NEWS DESK : ಸಮುದಾಯ ಬಾಂಧವರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ ಸೌಹಾರ್ದ ಸಂಬಂಧಗಳೊಂದಿಗೆ ಸಂಘಟನೆಯನ್ನು ಸದೃಢಗೊಳಿಸುವ ಚಿಂತನೆಯಡಿ ಕೊಡಗು ಜಿಲ್ಲಾ ಬಂಟರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿತ ‘ಬಂಟೆರೆನ ಸಮ್ಮಿಲನ’ ಕ್ರೀಡಾಕೂಟಕ್ಕೆ ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯುಕ್ತ ಚಾಲನೆ ದೊರೆಯಿತು. ಬಂಟೆರೆನ ಸಮ್ಮಿಲನ ಕ್ರೀಡಾಕೂಟವನ್ನು ಗಾಳಿಬೀಡು ನಿವೃತ್ತ ಯೋಧ ಬಾಬು ಪ್ರಸಾದ್ ರೈ ಮತ್ತು ಕೊಡಗು ಬಂಟರ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಗಿರೀಶ್ ರೈ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಸದಾನಂದ, ರೈ ಸಮುದಾಯ ಬಾಂಧವರ ಸಂಘಟನೆ ಮತ್ತು ಪರಸ್ಪರ ಸೌಹಾರ್ದತೆಗಾಗಿ ಕ್ರೀಡಾಕೂಟ ಆಯೋಜಿಸಲಾಗಿದ್ದು, ಇದರ ಯಶಸ್ಸಿಗೆ ಸಮುದಾಯ ಬಾಂಧವರು ಶ್ರಮಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ನಗರಸಭಾ ಸದಸ್ಯ ಅರುಣ್ ಶೆಟ್ಟಿ, ವಿಶ್ಮ ರೆಸಾರ್ಟ್ ಮಾಲೀಕ ನಿತಿನ್ ಶೆಟ್ಟಿ, ಬಂಟರ ಸಂಘದ ನಗರ ಕಾರ್ಯದರ್ಶಿ ಸುಜಾತ ಗಣೇಶ್ ರೈ, ನಿಕಟಪೂರ್ವ ಅಧ್ಯಕ್ಷೆ ಸೌಮ್ಯ ಸದಾಶಿವ ರೈ ಹಾಗೂ ಕೊಡಗು ಬಂಟರ ಭವನ ಟ್ರಸ್ಟ್ ಖಜಾಂಚಿ ಬಾಲಕೃಷ್ಣ ರೈ,ಬಂಟರ ಸಂಘದ ಗೌರವ ಸಲಹೆಗಾರ ಕೊರಗಪ್ಪ ರೈ, ಯುವ ಬಂಟ್ಸ್ ಅಸೋಸಿಯೇಷನ್ನ ಕಾರ್ಯದರ್ಶಿ ನಿತಿನ್ ರೈ, ಉಪಾಧ್ಯಕ್ಷರಾದ ಮಿಥುನ್ ರೈ, ಸುಜಿತ್ ಶೆಟ್ಟಿ, ಖಜಾಂಚಿ ಶಿವಪ್ರಸಾದ್ ರೈ, ಸದಸ್ಯರಾದ ಕಿಶೋರ್ ರೈ ಹಾಗೂ ಚರಣ್ ರೈ ಪಾಲ್ಗೊಂಡಿದ್ದರು. ಬಂಟರ ಸಮ್ಮಿಲನದ ಪ್ರಯುಕ್ತ ರಕ್ತದಾನ ಶಿಬಿರವೂ ನಡೆಯಿತು.