




ಕುಶಾಲನಗರ ಮೇ 10 NEWS DESK : ಕುಶಾಲನಗರ ತಾಲ್ಲೂಕು ವೀರಶೈವ – ಲಿಂಗಾಯತ ಮಹಾಸಭಾದ ವತಿಯಿಂದ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಇಂದು ಕುಶಾಲನಗರ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ವೀರಶೈವ ಸಮಾಜ ಬಾಂಧವರಿಗೆ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ನಂದೀಶ್, ಕ್ರೀಡಾಕೂಟಗಳು ಪರಸ್ಪರ ಸ್ನೇಹ, ಒಗ್ಗಟ್ಟಿಗೆ ಸಹಕಾರಿ ಹಾಗೂ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದರು. ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳೆಸಿಕೊಂಡು ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್, ಕ್ರೀಡಾಕೂಟಗಳು ಪರಸ್ಪರ ಪ್ರೀತಿ- ವಿಶ್ವಾಸ, ಬಾಂಧವ್ಯ ಹಾಗೂ ಸೌಹಾರ್ದತೆ ಬೆಳೆಸಲು ಸಹಕಾರಿಯಾಗಿವೆ ಎಂದರು. ವೀರಶೈವ ಸಮಾಜದ ವತಿಯಿಂದ ಕೈಗೊಳ್ಳುವ ಸಮಾಜಮುಖಿ ಸೇವಾ ಕಾರ್ಯಗಳಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಅಂತರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ತೊರೆನೂರು ಗ್ರಾಮದ ಟಿ.ಹೆಚ್.ಗಣೇಶ್ ಸಾಧನೆ ಬಗ್ಗೆ ಕ್ರೀಡಾಕೂಟದಲ್ಲಿ ಪ್ರಶಂಸೆ ವ್ಯಕ್ತಪಡಿಸಿದರು. ಮಹಾಸಭಾದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೀಪಿಕಾ ಕರುಣ್, ಮಹಾಸಭಾದ ತಾಲ್ಲೂಕು ಘಟಕದ ಉಪಾಧ್ಯಕ್ಷ ಎಂ.ವಿ.ಹರೀಶ್, ಪ್ರಧಾನ ಕಾರ್ಯದರ್ಶಿ ಬಿ.ಎನ್.ಶುಭಶೇಖರ್, ಕಾರ್ಯದರ್ಶಿ ಕೆ.ಡಿ.ಪ್ರಶಾಂತ್, ಎನ್.ಧರ್ಮೇಂದ್ರ, ಸಂಘಟನಾ ಕಾರ್ಯದರ್ಶಿ ಬಿ.ಬಿ.ಲೋಕೇಶ್, ಖಜಾಂಚಿ ವಿ.ಸಿ.ಅಜಿತ್, ನಿರ್ದೇಶಕ ಪಾಪಣ್ಣ, ಮಹಾಸಭಾದ ಕುಶಾಲನಗರ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಎಚ್.ಪಿ.ವಿನಯ್, ಉಪಾಧ್ಯಕ್ಷ ಎಂ.ಎಸ್.ರಾಜ, ಮಹಾಸಭಾದ ಕುಶಾಲನಗರ ಟೌನ್ ಘಟಕದ ಅಧ್ಯಕ್ಷ ಎಂ.ಸಿ.ಸಚಿನ್, ಪ್ರಮುಖರಾದ ಎಂ.ಎಸ್.ಗಣೇಶ್, ಎಚ್.ಸಿ.ಬಸವರಾಜ್, ಮಹಿಳಾ ಘಟಕದ ಸದಸ್ಯರಾದ ಮನು ಜಗದೀಶ್, ವಿಜಯ ಪಾಲಾಕ್ಷ, ಸರೋಜ ಆರಾಧ್ಯ, ಎಚ್.ಎಸ್.ಉಮಾ ಇತರರು ಇದ್ದರು.