
ಕುಶಾಲನಗರ, ಮೇ 17 NEWS DESK : ಶಿರಂಗಾಲ ಸರ್ಕಾರಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, ಪ್ರಾಂಶುಪಾಲರ ಹುದ್ದೆಗೆ ಮುಂಬಡ್ತಿ ಪಡೆದು ಕೂಡಿಗೆ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರಾಗಿ ಹೆಚ್.ಜೆ.ನಾಗರಾಜ್ ನೇಮಕಗೊಂಡಿದ್ದಾರೆ. ಪ್ರಾಂಶುಪಾಲರ ಹುದ್ದೆಗೆ ನಡೆದ ಕೌನ್ಸಿಲಿಂಗ್ ನಲ್ಲಿ ನಾಗರಾಜ್, ಕೂಡಿಗೆ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದರು. ಕೂಡಿಗೆ ಕಾಲೇಜಿಗೆ ಆಗಮಿಸಿದ ನೂತನ ಪ್ರಾಂಶುಪಾಲ ನಾಗರಾಜ್, ಪ್ರಭಾರ ಪ್ರಾಂಶುಪಾಲರಾದ ನಾಗಪ್ಪ ಯಾಲಕ್ಕಿಕಟ್ಟೆ ಅವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸೋಮಶೇಖರ್, ಮಾಜಿ ಉಪಾಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ, ಶಿರಂಗಾಲ ಕಾಲೇಜಿನ ಪ್ರಾಂಶುಪಾಲ ಸೋಮಚಂದ್ರ, ಕೂಡಿಗೆ ಗ್ರಾ.ಪಂ.ಮಾಜಿ ಅಧ್ಯಕ್ಷ ಟಿ.ಕೆ.ವಿಶ್ವನಾಥ್,ಶಿಕ್ಷಕರ ಸಂಘಟನೆಯ ಪ್ರಮುಖರಾದ ಸಿ.ಟಿ.ಸೋಮಶೇಖರ್, ಎಂ.ರಂಗಸ್ವಾಮಿ, ಎಸ್.ಎ.ಯೋಗೇಶ್, ಸಿಆರ್ಪಿ ಕೆ.ಶಾಂತಕುಮಾರ್, ನಾಗರಾಜ್ ಇತರರು ಇದ್ದರು.









