Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಕೋರ್ಸ್ ಗಳ ಪ್ರವೇಶಕ್ಕೆ ಮನವಿ : ಆಧುನಿಕ ಸೌಲಭ್ಯಗಳೊಂದಿಗೆ ಉತ್ತಮ ತಾಂತ್ರಿಕ ಶಿಕ್ಷಣಕ್ಕೆ ಆದ್ಯತೆ : ಪ್ರಾಂಶುಪಾಲ ಡಾ.ಪರಶಿವಮೂರ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಕೋರ್ಸ್ ಗಳ ಪ್ರವೇಶಕ್ಕೆ ಮನವಿ : ಆಧುನಿಕ ಸೌಲಭ್ಯಗಳೊಂದಿಗೆ ಉತ್ತಮ ತಾಂತ್ರಿಕ ಶಿಕ್ಷಣಕ್ಕೆ ಆದ್ಯತೆ : ಪ್ರಾಂಶುಪಾಲ ಡಾ.ಪರಶಿವಮೂರ್ತಿ*

ಜೂನ್ 16, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜೂ.16 NEWS DESK : ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 2025-26ನೇ ಪ್ರಸ್ತುತ ಸಾಲಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಸಿಇಟಿಯ ಕೌನ್ಸಿಲಿಂಗ್ ಮೂಲಕ ಪ್ರವೇಶವಕಾಶ ಕಲ್ಪಿಸಲಾಗಿದೆ.  ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ (ಇ ಅಂಡ್ ಸಿ )ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗ ಸೇರಿದಂತೆ ಒಟ್ಟು 4 ಕೋರ್ಸ್ ಗಳಿಗೆ ತಲಾ 60 ವಿದ್ಯಾರ್ಥಿಗಳಂತೆ ಪ್ರವೇಶವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ನಮ್ಮ ಕಾಲೇಜಿನಲ್ಲಿ ಪ್ರಸ್ತುತ 805 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪರಶಿವಮೂರ್ತಿ ತಿಳಿಸಿದರು.  ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿ ಸಿಇಟಿ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿ ಕೊಳ್ಳುವ ವಿದ್ಯಾರ್ಥಿಗಳು ಪ್ರಥಮ ಆದ್ಯತೆ ಮೇರೆಗೆ ಕುಶಾಲನಗರ ಸರ್ಕಾರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವಂತೆ ಪ್ರಾಂಶುಪಾಲರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.  ಉತ್ತಮ ತಾಂತ್ರಿಕ ಸೌಲಭ್ಯಗಳು ::  ಸರ್ಕಾರಿ ಕಾಲೇಜುಗಳ ಪೈಕಿ ಉತ್ತಮ ಮೂಲ ಸೌಲಭ್ಯ ಹಾಗೂ ತಾಂತ್ರಿಕ ಸೌಲಭ್ಯಗಳು, ಸುಸಜ್ಜಿತ ಸೆಮಿನಾರ್ ಹಾಲ್ ಗಳು, ಪ್ರಯೋಗಾಲಗಳು ಸೇರಿದಂತೆ ಕಂಪ್ಯೂಟರ್ ಗಳ ತರಬೇತಿ ಹಾಗೂ ಗ್ರಂಥಾಲಯ ಸೌಲಭ್ಯಗಳನ್ನು ಒಳಗೊಂಡಂತೆ ನುರಿತ ಹಿರಿಯ ಬೋಧಕ ವರ್ಗದವರನ್ನು ಹೊಂದಿರುವ ಈ ಕಾಲೇಜು ಕೊಡಗಿನ ಪ್ರತಿಷ್ಠಿತ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆಗಿದ್ದು, ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ಪ್ರಾಂಶುಪಾಲರಾದ ಡಾ.ಕೆ.ಐ ಪರಶಿವಮೂರ್ತಿ ತಿಳಿಸಿದರು. ತರಬೇತಿ ಮತ್ತು ಪ್ಲೇಸ್ಮೆಂಟ್ (Placement)):: ಕಳೆದ 18 ವರ್ಷಗಳ ಹಿಂದೆ ಆರಂಭಗೊಂಡ ಈ ಕಾಲೇಜಿನಲ್ಲಿ ಆಯ್ಕೆ ಅಂತಿಮ ವರ್ಷದ ಕೋರ್ಸ್ ಪೂರೈಸುವ ವಿದ್ಯಾರ್ಥಿಗಳಿಗೆ ಮುಂದಿನ ಉದ್ಯೋಗ ಕಂಡುಕೊಳ್ಳುವ ದಿಸೆಯಲ್ಲಿ ಕಾಲೇಜಿನಲ್ಲಿ ಟಿ.ಸಿ.ಎಸ್ ಕಂಪನಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸೇರಿದಂತೆ ಇನ್ನಿತರ ಕಂಪನಿಗಳಿಂದ ಪ್ಲೇಸ್ಮೆಂಟ್ (Placement)) (ನಿಶ್ಚಿತ ಉದ್ಯೋಗ ಕೊಡುವ ವ್ಯವಸ್ಥೆ) ಮತ್ತು ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳುವ ಕಾರ್ಯವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷ ನಡೆದ ಪ್ಲೇಸ್ಮೆಂಟ್ ಆಯ್ಕೆ ಪ್ರಕ್ರಿಯೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಜಾಗತಿಕ /ಖಾಸಗಿ ಕಂಪನಿಗಳಿಗೆ ನೇಮಕಗೊಂಡು ಉದ್ಯೋಗ ಮಾಡುತ್ತಿದ್ದಾರೆ ಎಂದು ವಿವರಿಸಿದರು.  ಕಾಲೇಜಿನ ಅಭಿವೃದ್ಧಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ವಿಶೇಷ ಕಾಳಜಿ ವಹಿಸಿದ್ದು, ಜಿಲ್ಲಾಡಳಿತ ಕೂಡ ಉತ್ತಮವಾಗಿ ಸ್ಪಂದಿಸುತ್ತಿದೆ ಎಂದು ಪಾಂಶುಪಾಲ ಡಾ ಪರಶಿವಮೂರ್ತಿ ತಿಳಿಸಿದರು.  ಉತ್ತಮ ಫಲಿತಾಂಶ :: ಈ ಕಾಲೇಜಿಗೆ ಸತತವಾಗಿ ಎಲ್ಲಾ ವಿಭಾಗಗಳಿಗೂ ಅತ್ಯುತ್ತಮ ಫಲಿತಾಂಶ ಲಭಿಸುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 2024-25ನೇ ಸಾಲಿನಲ್ಲಿ ನಡೆದ ಅಂತಿಮ ವರ್ಷದ ಸಿವಿಲ್ ವಿಭಾಗದ ವಿ.ಜೆ. ಜಾಸ್ ಲೀನಾ ಎಂಬ ವಿದ್ಯಾರ್ಥಿನಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಅತ್ಯುನ್ನತ 2ನೇ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಎಂದು ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ಎನ್ ಎಸ್ ಸತೀಶ್ ರವರು ತಿಳಿಸಿದರು.
ಗ್ರಾಮಾಂತರ ಪ್ರದೇಶದ ಹಾಗೂ ಬಡ ವಿದ್ಯಾರ್ಥಿಗಳ ಆಶಾಕಿರಣ ವಾಗಿರುವ ಈ ಇಂಜಿನಿಯರಿಂಗ್ ಕಾಲೇಜಿನಲ್ಲಿ ವೈಫೈ ಹಾಗೂ ಸ್ಮಾರ್ಟ್ ಕ್ಲಾಸ್ ನಂತಹ ಅತ್ಯಧುನಿಕ ತಾಂತ್ರಿಕ ವ್ಯವಸ್ಥೆಯೊಂದಿಗೆ ಉತ್ತಮ ತಾಂತ್ರಿಕ ಶಿಕ್ಷಣ ನೀಡಲಾಗುತ್ತಿದೆ . ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಈ ಕಾಲೇಜು ಭವಿಷ್ಯದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿದೆ ಎಂದರು.  ಸಿಇಟಿ ಕೌನ್ಸಿಲಿಂಗ್ ನಲ್ಲಿ ಕೊಡಗು ಜಿಲ್ಲೆ ಸೇರಿದಂತೆ ನೆರೆಯ ಹಾಗೂ ಇತರೆ ಜಿಲ್ಲೆಗಳ ವಿದ್ಯಾರ್ಥಿಗಳು ಈ ಕಾಲೇಜನ್ನು ಆಯ್ಕೆ ಮಾಡಿಕೊಳ್ಳಲು ಮನವಿ ಮಾಡಿದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಎನ್.ರಮೇಶ್ ಮಾತನಾಡಿ, ಕಾಲೇಜಿನಲ್ಲಿ ಕ್ರೀಡೆ ಮತ್ತು ಎನ್.ಎಸ್.ಎಸ್.ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ ಎಂದರು. ಹಾಸ್ಟೆಲ್ ಸೌಲಭ್ಯ :: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಆವರಣದಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿನಿಲಯ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಗೋಷ್ಠಿಯಲ್ಲಿ ಕಂಪ್ಯೂಟರ್ ವಿಭಾಗದ ಮುಖ್ಯಸ್ಥ  ಹಾಗೂ ಸಹ ಪ್ರಾಧ್ಯಾಪಕ ಡಾ. ಎಸ್.ರಂಗನಾಥ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಎನ್.ರಮೇಶ್, ಕಂಪ್ಯೂಟರ್ ವಿಭಾಗದ ಸಂಪನ್ಮೂಲ ಶಿಕ್ಷಕ  ಜಿ.ಶ್ರೀನಾಥ್, ಕಛೇರಿಯ ಅಧೀಕ್ಷಕರಾದ ಎಚ್.ಎ.ರೂಪಾ, ಎಂ.ಮಂಜು ಇದ್ದರು. ಕಾಲೇಜಿನ ಮಾಹಿತಿಗಾಗಿ ಸಂಪರ್ಕಕ್ಕೆ: : ಕಾಲೇಜಿನ ಫೋನ್ ನಂಬರ್-08276 298230, ಪ್ರಾಂಶುಪಾಲರು ಡಾ. ಕೆ.ಐ ಪರಶಿವಮೂರ್ತಿ -9449 624 417, ಡಾ. ಎನ್ ಎಸ್ ಸತೀಶ್-944 810 1220, ಡಾ. ಸೀನಪ್ಪ-8660 857 379 , ಡಾ. ರಮೇಶ್ .ಎನ್ -90359 84527 , ಶ್ರೀನಾಥ್ ಜಿ – 944 866 1470, ರೂಪ ಎಚ್ ಎ.-916 425 802, ಮಂಜು ಎಂ-77605 003 79, ಸುಮಂತ್ .ಕೆ.ವಿ. -8147887719. ಈ ನಂಬರ್ ಗಳನ್ನು ಸಂಪರ್ಕಿಸಲು ಕೋರಿದೆ. ಮಾಹಿತಿ ಪತ್ರ ಬಿಡುಗಡೆ ::  ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪರಶಿವಮೂರ್ತಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಬಿ.ಇ.ಕೋರ್ಸ್ ನ ಮಾಹಿತಿ ಪತ್ರವನ್ನು ಬಿಡುಗಡೆಗೊಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 4: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ…

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.