

ಸುಂಟಿಕೊಪ್ಪ ಜೂ.20 NEWS DESK : ಯುವಜನತೆ ದುಶ್ಚಟಗಳಿಗೆ ದಾಸರಾಗದೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಹೇಳಿದರು. ಸುಂಟಿಕೊಪ್ಪ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಜಾಗೃತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆಯು ತಮ್ಮ ಇಳಿವಯಸ್ಸಿನಲ್ಲೇ ತಂಬಾಕು ಸೇರಿದಂತೆ ಇನ್ನಿತರ ದುಶ್ಚಟಗಳಿಗೆ ಆಕರ್ಷಿತರಾಗಿ ತಮ್ಮ ಆರೋಗ್ಯವನ್ನು ಕೆಡಿಸಿಕೊಳ್ಳುತ್ತಿದ್ದಾರೆ. ತಂಬಾಕು ಸೇರಿದಂತೆ ದುಶ್ಚಟಗಳಿಗೆ ಯುವಜನತೆಯು ಆಕರ್ಷಿತಗೊಳ್ಳದೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಜಾಗೃತಿ ಅಗತ್ಯ ಎಂದು ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಎಎಸ್ಐ ಸುರೇಶ್ ಮಾತನಾಡಿ, ಅಪ್ರಾಪ್ತ ಮಕ್ಕಳು ತಂಬಾಕು ಖರೀದಿಸುವುದು ಮತ್ತು ಅಂಗಡಿಯವರು ಮಾರಾಟ ಮಾಡುವುದು ಕಾನೂನು ರೀತಿಯ ಅಪರಾಧ. ತಪ್ಪಿದ್ದಲ್ಲಿ ದಂಡದೊಂದಿಗೆ ಜೈಲು ಶಿಕ್ಷೆಗೂ ಒಳಗಾಗಬೇಕಾಗಿದೆ ಎಂದರು. ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾರಂಭದ ವೇದಿಕೆಯಲ್ಲಿ ಜಿಲ್ಲಾ ಜನಜಾಗ್ರತಿಯ ಸದಸ್ಯರಾದ ಡಿ ನರಸಿಂಹ ಸುಂಟಿಕೊಪ್ಪ ಪ್ರೌಢಶಾಲೆಯ ಸಹಶಿಕ್ಷಕಿ ಚಿತ್ರ. ಮಾನ್ಯ ಯೋಜನಾಧಿಕಾರಿಯದ ಪುರುಷೋತ್ತಮ್, ಒಕ್ಕೂಟ ಅಧ್ಯಕ್ಷರಾದ ಲೀಲಾವತಿ, ಸೇವಾ ಪ್ರತಿನಿದಿಗಳಾದ ಯಶೋಧ ಹಾಗೂ ನಂದಿನಿ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸುಂಟಿಕೊಪ್ಪ ವಲಯ ಮೇಲ್ವಿಚಾರಕರಾದ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು, ಸೇವಾ ಪ್ರತಿನಿಧಿ ಚಿತ್ರ ಸ್ವಾಗತಿಸಿದರು, ಶಿಕ್ಷಕ ಪ್ರಕಾಶ್ ವಂದಿಸಿದರು.











