ಚೆಟ್ಟಳ್ಳಿ NEWS DESK ಜೂ.22 : ಕಾರಿನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಶನಿವಾರ ರಾತ್ರಿ ಚೆಟ್ಟಳ್ಳಿಯಲ್ಲಿ ನಡೆದಿದೆ. ಚೆಟ್ಟಳ್ಳಿಯ ಬಿದ್ದಂಡ ಅಚ್ಚಯ್ಯ ಅವರ ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಕಾಡಾನೆ ಜಖಂಗೊಳಿಸಿದೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಸ್ಥಳೀಯರು ನಿತ್ಯ ಆತಂಕದಿಂದಲೇ ಜೀವನ ಸಾಗಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಅರಣ್ಯ ಇಲಾಖೆ ಕಾಡಾನೆ ದಾಳಿ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.







