
ಗೋಣಿಕೊಪ್ಪ ಜೂ.23 NEWS DESK : ಅಂತಾರಾಷ್ಟ್ರೀಯ 11ನೇ ಯೋಗ ದಿನಾಚರಣೆಯನ್ನು ಚೆಟ್ಟಿಮಾನಿ, ಕುಂದಚೇರಿ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಆಚರಿಸಲಾಯಿತು. ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿ ಯೋಗದಿನಾಚರಣೆಯನ್ನು ಶಕ್ತಿ ಕೇಂದ್ರದ ಪ್ರಮುಖ್ ಶರತ್ ಪದಕಲ್ಲು ನೇತೃತ್ವದಲ್ಲಿ ಆಚರಿಸಲಾಯಿತು. ಯೋಗ ಗುರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕುದುಪಜೆ ಶಿವಕುಮಾರ್, ಪಂಚಾಯಿತಿ ಅಧ್ಯಕ್ಷ ದಿನೇಶ್ ಪೊಡನೊಳನ, ಯುವ ನಾಯಕ ತೇಜಸ್ (ಚಿಕ್ಕಿ), ಯುವ ಮುರ್ಚಾ ಅಧ್ಯಕ್ಷ ಪರಶುದರ, ಯೋಗಪಟು ಜಿತಿಕ ಕಿರಣ್, ಪದಕಲ್ಲು ಬೂತ್ ಅಧ್ಯಕ್ಷ ಪುರುಷೋತ್ತಮ(ಪುಂಡು), ಕುಂದಚೇರಿ ಬೂತ್ ಅಧ್ಯಕ್ಷ ಸುರೇಶ, ಸಿಂಗತೂರ್ ಬೂತ್ ಕಾರ್ಯದರ್ಶಿ ಸುಬ್ರಮಣಿ ಪಪ್ಪು, ಪದಕಲ್ಲು ಬೂತ್ ಕಾರ್ಯದರ್ಶಿ ಚಿದು ಅಮೆ, ಕುಂದಚೇರಿ ವಿ.ಎಸ್.ಎಸ್.ಎನ್ ನಿರ್ದೇಶಕ ಕೇದಂಬಾಡಿ ಜಯ ಪ್ರಕಾಶ್ ಮತ್ತು ಕಾರ್ಯಕರ್ತರು ಹಾಜರಿದ್ದರು.









