
ಮಡಿಕೇರಿ ಜೂ.24 NEWS DESK : ವಿರಾಜಪೇಟೆ ಹೋಬಳಿ ಪೊದಕೋಟೆ ಗ್ರಾಮದಲ್ಲಿ ಮಳೆಯಿಂದ ಮನೆಗೆ ಹಾನಿಯಾಗಿದೆ. ಗ್ರಾಮದ ನಿವಾಸಿ ಹೆಚ್.ಕೆ.ಬಾಬು ವಾಸದ ಮನೆಯು ಮಳೆಯಿಂದಾಗಿ ಭಾಗಶಃ ಹಾನಿಯಾಗಿದ್ದು, ಕಂದಾಯ ಪರಿವೀಕ್ಷಕರು, ಸಹಾಯಕ ಅಭಿಯಂತರರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಸದಸ್ಯರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.









