ಸುಂಟಿಕೊಪ್ಪ ಜೂ.25 NEWS DESK : ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲೇರಿಯಾ ವಿರೋಧ ಮಾಸಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕೀಟಶಾಸ್ತ್ರಜ್ಞ ಮಂಜುನಾಥ್, ಮಲೇರಿಯಾ ಜ್ವರವನ್ನು ಶೀಘ್ರವಾಗಿ ಪತ್ತೆ ಹಚ್ಚುವ ಮೂಲಕ ಪೀಡಿತ ವ್ಯಕ್ತಿಯನ್ನು ಗುಣಪಡಿಸಬಹುದೆಂದು ತಿಳಿಸಿದರು. ಮಲೇರಿಯಾ ಜ್ವರದ ಲಕ್ಷಣಗಳ ಬಗ್ಗೆ ಮತ್ತು ಚಿಕಿತ್ಸೆ ಯ ಬಗ್ಗೆ ಸೊಳ್ಳೆಗಳ ಜೀವನ ಚಕ್ರ ಹಾಗೂ ಡೆಂಗ್ಯೂ ಜ್ವರ, ಚಿಕೂನ್ ಗುನ್ಯಾ, ಜ್ವರ ಹಾಗೂ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಪರಿಸರ ಸ್ವಚ್ಛತೆಯ ಬಗ್ಗೆ ನೀರಿನ ಸ್ವಚ್ಛತೆಯ ಬಗ್ಗೆ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿಯನ್ನು ನೀಡಿದರು. ಈ ಸಂದರ್ಭ ಮಾದಾಪುರ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ನಿಶಾ, ಡಾ.ದರ್ಶನ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ವಿಶ್ವಜ್ಞಾ, ಶಿವಪ್ಪ, ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಮಾರ್ಗರೇಟ್ ಆಳ್ವ, ಗ್ರೀಷ್ಮ ಸುಶೀಲ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸಿಂಧು, ಮನೋಜ್, ಶಫಿನಾ, ಶ್ವೇತಾ, ಮೇನಕಾ, ಪ್ರೀತಿ, ಚೈತ್ರ, ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.












