ಸಿದ್ದಾಪುರ ಜೂ.28 NEWS DESK : ಆದರ್ಶ ಪರಿಶುದ್ಧತೆಯ ಶತಮಾನಗಳಿಂದ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ 100ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಕೊಡಗು ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ವತಿಯಿಂದ ಜೂ.29 ರಂದು “ಅಸ್ಸಿರಾತಲ್ ಮುಸ್ತಖೀಂ ” ಎಂಬ ಶೀರ್ಷಿಕೆಯಲ್ಲಿ ಉದಾತ್ತ ದೀನಿನ ನೈಜ ಪಾರಂಪರ್ಯದ ವಿಶ್ಲೇಷಣೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಭಾನುವಾರ ಸಂಜೆ 7 ಘಂಟೆಗೆ ಸಿದ್ದಾಪುರದ ಮುನವ್ವಿರುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ “ಅಸ್ಸಿರಾತಲ್ ಮುಸ್ತಖೀಂ ” ಎಂಬ ಶೀರ್ಷಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮಸ್ತ ಕೇಂದ್ರ ಜಂಇಯ್ಯತುಲ್ ಮುಅಲ್ಲಿಮೀನ್ ಸೆಂಟ್ರಲ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಎಂ.ಅಬ್ದುರ್ರಹ್ಮಾನ್ ಮುಸ್ಲಿಯಾರ್ ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಉಪ ಖಾಝಿಗಳು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಎಂ ಅಬ್ದುಲ್ಲ ಫೈಝಿ ಉಸ್ತಾದ್ ಉದ್ಘಾಟಿಸಲಿದ್ದು, ಮುಖ್ಯ ಭಾಷಣಕಾರರಾಗಿ ಖ್ಯಾತ ವಾಗ್ಮಿ ಸುನ್ನತ್ ಜಮಾಅತಿನ ವೇದಿಕೆಗಳಲ್ಲಿ ಮಿನುಗು ತಾರೆ ಮುಸ್ತಫ್ ಅಶ್ರಫಿ ಕಕ್ಕುಪಡಿ ವಿಷಯ ಮಂಡಿಸಲಿದ್ದಾರೆ. ಕೊಡಗು ಜಿಲ್ಲಾ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಎ.ಸಿ.ಉಸ್ಮಾನ್ ಫೈಝಿ ಉಮರ್ ಫೈಝಿ ಆರಿಫ್ ಫೈಝಿ ಮತ್ತು ಜಿಲ್ಲೆ ನೇತಾರರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಮಸ್ತ ಕೊಡಗು ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಕೋಶಾಧಿಕಾರಿ ಎಂ.ತಮ್ಲೀಖ್ ದಾರಿಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











