ನಾಪೋಕ್ಲು ಜೂ.30 NEWS DESK : ಕಿರುಂದಾಡು ಗ್ರಾಮದ ತೋಟಗಳಲ್ಲಿ ಕಾಡಾನೆಗಳು ದಾಳಿ ಮಾಡಿ ಬೆಳೆ ನಾಶಪಡಿಸಿದೆ. ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಗಳಲ್ಲಿ ದಾಂಧಲೆ ನಡೆಸಿದ್ದು, ಬೆಳೆಗಾರರು ತೋಟದಲ್ಲಿದ್ದ ತೆಂಗು, ಅಡಿಕೆ, ಕಾಫಿ, ಬಾಲೆ ಗಿಡಗಳನ್ನು ನಾಶಪಡಿಸಿ ನಷ್ಟ ಉಂಟು ಮಾಡಿದೆ. ಪಾರಾಣೆ ಗ್ರಾಮ ಪಂಚಾಯಿತಿಯ ಕಿರುಂದಾಡು ಗ್ರಾಮದ ಕಲಿಯಂಡ ಪೂವಣ್ಣ ಅವರ ತೋಟಗಳಲ್ಲಿ ದಾಳಿ ನಡೆಸಿರುವ ಕಾಡಾನೆಗಳ ಹಿಂಡು 3 ತೆಂಗು, 60 ಅಡಿಕೆ ಗಿಡ, ಕಾಫಿ, ಬಾಲೆ ಸೇರಿದಂತೆ ಅಪಾರ ಕೃಷಿ ಗಿಡಗಳನ್ನು ಧ್ವಂಸಗೊಳಿಸಿ ಫಸಲುಗಳಿಗೆ ಹಾನಿ ಉಂಟು ಮಾಡಿದೆ. ಕಿರುಂದಾಡು, ಕೈಕಾಡು ಗ್ರಾಮದ ಕೆ.ಡಿ.ಮೋಹನ್, ಹಂಸ, ಅಬ್ದುಲ್ಲಾ ಸೇರಿದಂತೆ ಇನ್ನಿತರ ತೋಟದಲ್ಲೂ ಕೃಷಿ ಗಿಡಗಳನ್ನು ಕಾಡಾನೆಗಳು ನಾಶಪಡಿಸಿದ್ದು, ಸಬಂಧಸಿದ ಇಲಾಖೆ ಹಾಗೂ ಸರ್ಕಾರ ನಷ್ಟಕ್ಕೆ ಒಳಗಾದ ರೈತರಿಗೆ ಸೂಕ್ತ ನಷ್ಟ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.











