ಮಡಿಕೇರಿ ಜೂ.30 NEWS DESK : ನಗರದ ಹೊಸ ಬಡಾವಣೆಯಲ್ಲಿ ಶಾಸಕರ ಅನುದಾನ ರೂ.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಹೊಸ ಬಡಾವಣೆಯ ನವ ಗ್ರಾಮದ ಅಧ್ಯಕ್ಷ ರವಿ ಹಾಗೂ ಉಪಾಧ್ಯಕ್ಷ ಸ್ಟೀವನ್ ಡಿಸೋಜ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಂಘದ ಪದಾಧಿಕಾರಿಗಳಾದ ಉಮೇಶ್, ಸುಮಿತ್ರ, ಅಮ್ಮಿ, ಗುರುವಣ ಹಾಗೂ ಬಡಾವಣೆಯ ಎಲ್ಲಾ ಸದಸ್ಯರು ಹಾಜರಿದ್ದು, ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.











