ಮೈಸೂರು ಜು.4 NEWS DESK : ರಾಜ್ಯ ಹಾಗೂ ಹೊರ ರಾಜ್ಯದ ಸಾವಿರಾರು ಭಕ್ತರು ಎರಡನೇ ಆಷಾಡ ಶುಕ್ರವಾರ ನಾಡದೇವತೆ, ಬೆಟ್ಟದ ತಾಯಿ ಶ್ರೀ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಆಷಾಡದ ಪ್ರಯುಕ್ತ ಶ್ರೀಚಾಮುಂಡಿ ದೇವಾಲಯವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಆಕರ್ಷಣೀಯಗೊಳಿಸಲಾಗಿತ್ತು. ಇಂದು ಕರ್ನಾಟಕದ ಅನೇಕ ರಾಜಕಾರಣಿಗಳು ಹಾಗೂ ಚಿತ್ರನಟರು ಬೆಟ್ಟಕ್ಕೆ ಬೇಟಿ ನೀಡಿ ಶ್ರೀ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು.












