
ಸೋಮವಾರಪೇಟೆ ಜು.7 NEWS DESK : ಯಡೂರು ದೇವರಕೆರೆ ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಉದ್ಯಮಿ ಹರಪಳ್ಳಿ ರವೀಂದ್ರ ಕೆರೆ ತಟದಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಕಳೆದ 4 ವರ್ಷದ ಹಿಂದೆ ರವಿಂದ್ರ ಅವರು ತನ್ನ ಸ್ವಂತ ಖರ್ಚಿನಲ್ಲಿ ಕೆರೆ ಹೂಳು ತೆಗಿಸಿದ್ದರು. ಪ್ರತಿ ವರ್ಷ ನೀರು ತುಂಬುತ್ತಿರುವುದರಿಂದ ರೈತರು ಕೆರೆಯ ನೀರನ್ನು ಕೃಷಿಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭ ಯಡೂರು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ವೈ.ಡಿ.ಮೋಹನ್, ಮಾಜಿ ಅಧ್ಯಕ್ಷ ಮಲ್ಲಪ್ಪ, ಗ್ರಾಮಸ್ಥರಾದ ಲೋಹಿತ್, ಸರ್ವೇಶ್, ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜ್ ಇದ್ದರು.








