
ಕುಶಾಲನಗರ ಜು.7 NEWS DESK : ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ನ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಡಾ.ಹೆಚ್.ಎಂ.ರಘುಕೋಟಿ ಅವರು ಆಯ್ಕೆಯಾಗಿದ್ದಾರೆ. ಪರಿಷತ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಜಾನ್ ಸುಮುವೆಲ್ ಜೆ.ಕಿಮ್, ರಾಷ್ಟ್ರೀಯ ಸಂಯೋಜಕರಾದ ಜೆ.ಆಲ್ಬರ್ಟ್ ಮನೋಜ್ ರಾಜ್, ರಾಷ್ಟ್ರೀಯ ಉಪಾಧ್ಯಕ್ಷರಾದ ಮಣಿಕಂದನ್, ರಾಷ್ಟ್ರೀಯ ಮಹಿಳಾ ಸಭಾಧ್ಯಕ್ಷರಾದ ರೋಹಿಣಿ ದೀಕ್ಷಿತ್, ರಾಷ್ಟ್ರೀಯ ಆಡಳಿತ ಮಂಡಳಿಯ ನಿರ್ದೇಶಕರಾದ ಬಿಷಪ್ ಸ್ಯಾಮ್ಸನ್ಸ್ ಸಂತೋಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಘಟಕದ ರಾಜ್ಯಾಧ್ಯಕ್ಷರಾದ ಅನಿತಾ ಹಾಗೂ ರಾಜ್ಯ ಮಹಿಳಾ ಅಧ್ಯಕ್ಷರಾದ ಭಾಗ್ಯಮ್ಮ.ಬಿ ಸೇರಿದಂತೆ ಸಂಸ್ಥೆಯ ಗಣ್ಯರ ಸಮ್ಮುಖದಲ್ಲಿ ನೇಮಕ ಮಾಡಿ ಆದೇಶ ಪತ್ರವನ್ನು ವಿತರಿಸಲಾಗಿದೆ.








