
ಮಡಿಕೇರಿ ಜು.10 NEWS DESK : ಮಾಯಮುಡಿ ಗ್ರಾಮ ವ್ಯಾಪ್ತಿಯಲ್ಲಿ ಸರಕಾರ ಅನುಮೋದಿಸಿದ ಶಾಲೆಗೆ, ಕೊಠಡಿಗಳನ್ನು ನಿರ್ಮಿಸುವ ಉದ್ದೇಶದಿಂದ ರೂ.79 ಲಕ್ಷದ ಕಾಮಗಾರಿಗೆ ಚಾಲನೆ ದೊರೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಈ ಶಾಲೆಯ ಹಳೆ ವಿದ್ಯಾರ್ಥಿ. ಹಾಗಾಗಿ ಸಚಿವರು ಈ ಶಾಲೆಯ ಅಭಿವೃದ್ಧಿಗೆ ತಮ್ಮ ವಿಶೇಷ ಅನುದಾನದ ಮೂಲಕ ರೂ.79 ಲಕ್ಷ ನೀಡಿರುವುದನ್ನು ನೀಡಿರುವುದಾಗಿ ತಿಳಿಸಿದರು. ಕ್ಷೇತ್ರದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ, ತಾನು ಹಾಗೂ ಸರಕಾರ ಮಕ್ಕಳ ವಿದ್ಯಾರ್ಜನೆ ಕಡೆಗೆ ಹೆಚ್ಚಿನ ಗಮನವನ್ನು ನೀಡುತ್ತಿದ್ದು, ಪೋಷಕರು ಹಾಗೂ ಶಿಕ್ಷಕರು ಮಕ್ಕಳ ವಿದ್ಯಾಭ್ಯಾಸ ಉನ್ನತಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು. ಸಾಲು ಕೊಠಡಿಯಲ್ಲಿ ಮಕ್ಕಳಿಗೆ ಬೇಕಾದ ಎಲ್ಲಾ ಆಧುನಿಕ ಸೌಲತ್ತುಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ ಎಂದು ಇದೇ ಸಂದರ್ಭ ಶಾಸಕರು ಹೇಳಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪ್ರತ್ಯು, ಮಾಯಮುಡಿ ಪಂಚಾಯಿತಿ ಅಧ್ಯಕ್ಷರು ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಸ್ಥಳೀಯ ಪ್ರಮುಖರು, ಪಕ್ಷದ ಪ್ರಮುಖರು, ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಸ್ಥಳೀಯ ಉಪಸ್ಥಿತರಿದ್ದರು.










