ಮಡಿಕೇರಿ ಜು.11 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಗೌರವಿಸಲಾಯಿತು. ಶಾಸಕರ 51ನೇ ಹುಟ್ಟುಹಬ್ಬದ ಹಿನ್ನೆಲೆ ವೈದ್ಯಾಧಿಕಾರಿ ಹಾಗೂ ಸಮಾಜ ಸೇವಕರಾದಹೆಚ್.ವಿ.ದೇವರಾಸ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಶಾಲು ಹೊದಿಸಿ, ಬೆಳ್ಳಿ ಕಿರೀಟ ನೀಡಿ ಗೌರವಿಸಿದರು.










