ಸೋಮವಾರಪೇಟೆ ಜು.11 NEWS DESK : ಕೊಡ್ಲಿಪೇಟೆಯ ಎಸ್.ಕೆ.ಎಸ್ ಕಲ್ಲುಮಠ ಶಾಲೆಯಲ್ಲಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀ ಮಹಾಂತ ಸ್ವಾಮೀಜಿ ಅವರ ನೇತೃತ್ವದಲ್ಲಿ ಶಾರದಾಂಬೆಗೆ ಪೂಜೆ ಸಲ್ಲಿಸಿ, ಶಾಲೆಗೆ ನೂತನವಾಗಿ ದಾಖಲಾದ ಎಲ್.ಕೆ.ಜಿ ಮಕ್ಕಳಿಗೆ ಅಕ್ಷರಾಭ್ಯಾಸ ನೆರವೇರಿತು. ನಂತರ ಮಾತನಾಡಿದ ಶ್ರೀ ಮಹಾಂತ ಸ್ವಾಮೀಜಿ ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಆಶೀರ್ವದಿಸಿದರು. ಸಂಸ್ಥೆಯ ಮುಖ್ಯೋಪಾಧ್ಯರಾದ ಹೆಚ್.ಎಂ.ಅಭಿಲಾಶ್ ಮಾತನಾಡಿದರು. ಶಾಲೆಯ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 7ನೇ ತರಗತಿ ವಿದ್ಯಾರ್ಥಿನಿ ಅಮೃತ ಪ್ರಾರ್ಥನೆ ಮಾಡಿದರು. ಶಿಕ್ಷಕಿ ಕೆ.ಜೆ.ಶೀಲಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸೌಭಾಗ್ಯ ಸ್ವಾಗತಿಸಿ, ವಂದಿಸಿದರು.










