
ಸುಂಟಿಕೊಪ್ಪ ಜು.15 NEWS DESK : ನಮ್ಮ ಸುತ್ತ ಮುತ್ತಲಿನ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರಿಂದ ಪರಿಸರವು ಸಮೃದ್ಧಿಯಾಗಿರುತ್ತದೆ ಎಂದು ಸುಂಟಿಕೊಪ್ಪ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಹೀದ್ಜಾನ್ ಅಭಿಪ್ರಾಯ ವ್ಯಕ್ತಪಡಿಸಿದರು. ಗದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪರಿಸರದ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಂಡು ಮನೆಯ ಪರಿಸರದಲ್ಲಿ ಹಾಗೂ ಅರಣ್ಯಗಳಲ್ಲಿ ನಾವು ಹಣ್ಣಿನ ಗಿಡಗಳನ್ನು ಬೆಳೆಸಲು ಹೆಚ್ಚಿನ ಆದ್ಯತೆ ನೀಡುವುದರಿಂದ ಭೂಮಿಯಲ್ಲಿ ಜೀವಿಸುವ ಪ್ರಾಣಿ ಪಕ್ಷಿಗಳಿಗೆ ಆಹಾರ ದೊರೆಯುವುದಲ್ಲದೆ ಪರಿಸರವು ಅಭಿವೃದ್ಧಿಗೊಳ್ಳುತ್ತದೆ. ಆದ್ದರಿಂದ ಮಕ್ಕಳು ಮನೆ ಸೇರಿದಂತೆ ಅರಣ್ಯಗಳಲ್ಲಿ ಹಣ್ಣಿನ ಗಿಡಗಳನ್ನು ಪೋಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ವಹೀದ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗಿಡಗಳನ್ನು ನೆಡುವುದು ಒಂದು ದಿನಕ್ಕೆ ಸಿಮಿತವಾಗದೆ ಅವುಗಳನ್ನು ನಿತ್ಯವು ಹಾರೈಕೆಗೊಳಿಸುವ ಕಾರ್ಯವಾಗಬೇಕು ಆಗಿದ್ದಲ್ಲಿ ಮಾತ್ರ ತಾವು ಕೈಗೊಂಡ ಕಾರ್ಯವು ಯಶಸ್ಸುಗೊಳ್ಲಲು ಸಾಧ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಮುಖ್ಯೋಪಾದ್ಯಾಯನಿ ಹೇಮಾ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಶ್ರೀ.ಕ್ಷೇ.ಧ.ಗ್ರಾ.ಯೋ. ಸುಂಟಿಕೊಪ್ಪ ವಲಯ ಮೇಲ್ವಿಚಾರಕರಾದ ಸಂತೋಷ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತವಿಕ ನುಡಿಗಳನ್ನಾಡಿದರು. ಸಮಾರಂಭದ ವೇದಿಕೆಯಲ್ಲಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಒಕ್ಕೂಟದ ಅಧ್ಯಕ್ಷ ನಾಗರತ್ನ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅನಿತಾ, ಸಹ ಶಿಕ್ಷಕಿ ಮೀನಾ ಪರಿಸರದ ಕುರಿತು ಮಾತನಾಡಿದರು. ಈ ಸಂದರ್ಭ ಶೌರ್ಯ ಘಟಕದ ಸದಸ್ಯರು, ಸೇವಾ ಪ್ರತಿನಿಧಿ ಜ್ಯೋತಿಲಕ್ಷ್ಮೀ ಸ್ವಾಗತಿಸಿ, ಶಾಲಾ ಸಹ ಶಿಕ್ಷಕಿ ಅನಿತಾ ವಂದಿಸಿದರು.








