ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದಿಂದ ಕಥೆ ಹೇಳುವ ಸ್ಪರ್ಧೆ ಆಯೋಜಿಸಲಾಗಿದೆ. ಆ.3 ರಂದು ಭಾನುವಾರ ವಿರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದ ಕಾಮಧೇನು ಗೋ ಶಾಲೆಯಲ್ಲಿ ‘ಕಥಾ ಸಮಯ’ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸ್ವರಚಿತ ಕಥೆ ವಾಚಿಸಲು ಮೂರರಿಂದ ಐದು ನಿಮಿಷ ಸಮಯದ ಅವಕಾಶವಿರುತ್ತದೆ. ಎಲ್ಲಾ ವಯೋಮಾನದವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತರು ತಮ್ಮ ಹೆಸರನ್ನು ಜು.25 ರೊಳಗಾಗಿ 9353531976, 917760908774 ಸಂಖ್ಯೆಯನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳ ಬಹುದಾಗಿದೆ.










