
ಮಡಿಕೇರಿ NEWS DESK ಜು.26 : ಸೋಮವಾರಪೇಟೆ ತಾಲ್ಲೂಕಿನಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಕುಂಬೂರು ಗ್ರಾಮದಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಹಾನಿಯಾಗಿದೆ. ಆಟೋ ಚಾಲಕ ಕುಂಬೂರು ಗ್ರಾಮದ ನಿವಾಸಿ ಪ್ರವೀಣ್ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.








