
ಮಡಿಕೇರಿ ಆ.1 NEWS DESK : ಮಡಿಕೇರಿ-ಸಂಪಾಜೆ ಹೆದ್ದಾರಿಯ ಬೃಹತ್ ತಡೆಗೋಡೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ನಗರಸಭಾ ನಾಮ ನಿರ್ದೇಶಿತ ಸದಸ್ಯ ಮುದ್ದುರಾಜು, ಸದಾ ಮುದ್ದಪ್ಪ, ಮೂಡ ಸದಸ್ಯ ಆರ್.ಪಿ.ಚಂದ್ರಶೇಖರ್ ಹಾಗೂ ಅಧಿಕಾರಿಗಳು ಹಾಜರಿದ್ದರು.










