
ಮಡಿಕೇರಿ NEWS DESK ಆ.3 : ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನೂತನ ದಂತ ಚಿಕಿತ್ಸಾ ವಿಭಾಗ ಹಾಗೂ ಓಪಿಜಿ ಎಕ್ಸ್ ರೇ ಮೆಷಿನ್ ಅನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಕೊಡಗು ಮೆಡಿಕಲ್ ಕಾಲೇಜು ಆಸ್ಪತ್ರೆಯನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸಲಾಗುವುದು. ಕೊಡಗಿನ ಜನರ ಬಹುಕಾಲದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರಕಾರದಿಂದ ಅಗತ್ಯ ಅನುದಾನ ತರಲಾಗುವುದು ಎಂದು ಭರವಸೆ ನೀಡಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಸೇವೆಯನ್ನು ಕರ್ತವ್ಯ ಎಂದು ಪರಿಗಣಿಸಿ ರೋಗಿಗಳನ್ನು ಗಮನಿಸಬೇಕು. ಬಹುತೇಕ ಎಲ್ಲಾ ರೀತಿಯ ಉನ್ನತ ಚಿಕಿತ್ಸೆಗಳು ಕೊಡಗು ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ದಂತ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥ ಡಾ.ಕೇದಾರನಾಥ್ ಎನ್.ಎಸ್ ಅವರು ಮಾತನಾಡಿ ವಿಸ್ತಾರವಾದ ನವೀನ ದಂತ ಚಿಕಿತ್ಸೆ ವಿಭಾಗ ಮತ್ತು ಓಪಿಜಿ ಎಕ್ಸರೇ ಮೆಷಿನ್ ಸೌಲಭ್ಯ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ದಂತ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ರಾಷ್ಟಿçÃಯ ಕಾರ್ಯಕ್ರಮವಾದ ದಂತ ಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ, 45 ವರ್ಷಕ್ಕಿಂತ ಹೆಚ್ಚು ವಯಸ್ಸಾದವರಿಗೆ ಉಚಿತವಾಗಿ ಕೃತಕ ಹಲ್ಲು ಮತ್ತು ಹಲ್ಲು ಸೆಟ್ಟು ಗಳನ್ನು ತಯಾರು ಮಾಡಿ ನೀಡಲಾಗುತ್ತದೆ. ಬಾಯಿ, ದವಡೆ ಮತ್ತು ಮುಖದ ಶಸ್ತ್ರ ಚಿಕಿತ್ಸೆ ಜಾರಿಯಲ್ಲಿದ್ದು, ಕಳೆದ 4 ವರ್ಷಗಳಿಂದ ಸುಮಾರು 250 ಕ್ಕೂ ಹೆಚ್ಚು ರೋಗಿಗಳು ಉಚಿತವಾಗಿ ಇದರ ಲಾಭ ಪಡೆದಿದ್ದಾರೆ ಎಂದರು. ಆಸ್ಪತ್ರೆಯ ಡೀನ್ ಹಾಗೂ ನಿರ್ದೇಶಕ ಡಾ.ಲೋಕೇಶ್ ಎಲ್.ಜಿ ಅವರು ಮಾತನಾಡಿ ಐದಾರು ವರ್ಷಗಳಿಂದ ದಂತ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಹೊಸ ಹೊಸ ಸೌಲಭ್ಯ ಒದಗಿಸಿರುವ ಹಿನ್ನೆಲೆ ಹೆಚ್ಚು ಜನರಿಗೆ ಉತ್ತಮ ರೀತಿಯಲ್ಲಿ ದಂತ ಚಿಕಿತ್ಸೆ ಒದಗಿಸಲು ಮುಂದಾಗಬೇಕೆAದು ಸಲಹೆ ನೀಡಿದರು. ವೈದ್ಯಕೀಯ ಅಧ್ಯಕ್ಷ ಡಾ.ಸೋಮಶೇಖರ್ ಹಾಗೂ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ನಂಜುಂಡಯ್ಯ ಅವರು ಮಾತನಾಡಿ ದಂತ ಚಿಕಿತ್ಸಾ ವಿಭಾಗದಲ್ಲಿ ಲಭ್ಯವಿರುವ ನೂತನ ಸೌಲಭ್ಯಗಳನ್ನು ಜಿಲ್ಲೆಯ ಸಮಸ್ತ ಜನರು ಸದುಪಯೋಗಪಡಿಸಬೇಕು ಎಂದು ಮನವಿ ಮಾಡಿದರು. *ವಿಶೇಷ ಚಿಕಿತ್ಸಾ ಘಟಕ ಲೋಕಾರ್ಪಣೆ*
ಇದೇ ಸಂದರ್ಭ ಶಾಸಕ ಡಾ.ಮಂತರ್ ಗೌಡ ಅವರು ಕೊಡಗು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸಾ ಘಟಕಗಳನ್ನು ಲೋಕಾರ್ಪಣೆಗೊಳಿಸಿದರು. ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಇಲಾಖಾ ಮುಖ್ಯಸ್ಥ ಡಾ.ಕಾಮತ್, ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ನಗರಸಭಾ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಜಿ.ಸಿ.ಜಗದೀಶ್, ಮುದ್ದುರಾಜ್, ಕಲೀಲ್ ಬಾಷಾ ಸೇರಿದಂತೆ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.








